
* ಮಧುರ ನಯನ ಮಧುರ ವಚನ ಮಧುರ ಹಸನ - ಮಧುರಾಧಿಪತಿ
===
ಇಂದು ವ್ಯಾಲೆಂಟೈನ್ಸ್ ಡೇ. ಈ ದಿನ ನಾನು ಪದೆ ಪದೆ ಗುನುಗುತಿರುವುದು ಪು.ತಿ.ನ. ಅವರ ಈ ದೈವೀಕವಾದ ರಚನೆ : "ಹೃದಯ ಹೃದಯ ಮಿಲನ ದೊಳು".ನಮ್ಮೆಲ್ಲರ ಇರುವಿನ ನಡುವೆ ಇರುವ ಇರುಳ ಛಾಯೆಯನ್ನು ನೀಗುವ ತಮೋಘ್ನಕಾರಕ - ಈ ಪ್ರೀತಿ ಎಂದಿದ್ದಾರೆ . ಆಹಾ! ಎಂಥಾ ಅಮೋಘ ಭಾವನೆ! ಮಧುರ ಅನುಭಾವಗಳ,ಅನುಭವಗಳ ಮೂಡಿಸುವ ಪ್ರೇಮ, ಜೀವನ್ಮುಖಿಗಳಾಗಲು ಚಿಲುಮೆಯಾಗಿ, ನವೋತ್ಸಾಹವಾಗಿ, ಸತ್ವ ಪ್ರೇರಕವಾಗಿ,"ಮನದರ್ತಿಯ ಪ್ರೇರಣೆ" ಎಂದೆನಿಸುತ್ತದೆ.ಪ್ರೇಮವು ಚೇತನವನ್ನು ಹಸನು ಮಾಡುವ ಕ್ರಿಯೆಯೆಂಬ ಅಧ್ಯಾತ್ಮದ ಮೆರುಗು ಈ ರಚನೆಯಲ್ಲಿದೆ. ನಿಜಕ್ಕೂ ಇದನ್ನು ಬರೆದ ನರಸಿಂಹಾಚಾರ್ಯರೇ ಧನ್ಯರು,ಆಲಿಸಿದ ನಾವೇ ಧನ್ಯರು! ಇಡೀ ಹಾಡು ವಿಜೃಂಭಣೆಯಿಂದ ರಾರಾಜಿಸುತ್ತದೆ. ಸಾಹಿತ್ಯದಷ್ಟೆ ಸೊಗಸಾಗಿ ಸಂಗೀತವನ್ನು ಸ್ವರಬದ್ಧ ಗೊಳಿಸಿದ್ದಾರೆ ಸಿ.ಅಶ್ವಥ್ ಅವರು.
===
ಸಂಕಲನ: ಭಾವ ಬಿಂದು
ಸಾಹಿತ್ಯ: ಪು.ತಿ.ನ.
ಸಂಗೀತ: ಸಿ. ಅಶ್ವಥ್
ಗಾಯನ: ಹೆಚ್. ಕೆ. ನಾರಾಯಣ್ ಮತ್ತು ಎಂ.ಎಸ್.ಶೀಲ
===
ಹೃದಯ ಹೃದಯ ಮಿಲನ ದೊಳಗೆ ಮಧುರವಹುದು ಧಾತ್ರಿ
ಮಧುರ ನಯನ ಮಧುರ ವಚನ ಮಧುರ ಹಸನ ಮೈತ್ರಿ
ಇರವಿರವಿನ ನಡುವಣಿರುಳ ಪರಿಹಸುವ ಸರ್ವಳಿ
ಅರಿವರ್ಥವ ದಮಿಸುವೂರ್ಜೆ ನರಗೊಲುಮೆಯ ಬಳುವಳಿ
ಇನಿಯರೊಸಗೆ ಮೊಗದೊಳೆಸೆವ ತನಿಯಕಾಂತಿ ಏನೆಳೆ
ಅನುಕರಿಸುವ ಪರ್ವೋತ್ಸವ ಮನದರ್ತಿಯ ಪ್ರೇರಣೆ
ಹೃದಯ ಹೃದಯ ಮಿಡಿಳಿವಾಗೆ ಮಧುರವಹುದು ಚೇತನ
ಮಧುರೇಕ್ಷಣ ಮಧುರವಾಣಿ ಮಧುರಸ್ಮಿತ ನೂತನ.
===
ಇಲ್ಲಿ ಕೇಳಿ ಆನಂದಿಸಿ :
http://www.kannadaaudio.com/Songs/Bhaavageethe//BhaavaLahari/HrudayaHrudayaMilanadolu.ram
===
No comments:
Post a Comment