Tuesday, September 29, 2009

ಮುಗ್ಧತೆಯ ಮಾರಣಹೋಮ

--- Still in Draft Phase ---

ನನ್ನ ಜೀವನದಲ್ಲಿ ಒಂದು ಕಾಲ ಇತ್ತು -- ಸೌಂದರ್ಯ ಅನ್ನೊದಕ್ಕೆ ತನ್ನದೆ ಆದ ವಿಶಿಷ್ಟ ಸ್ಥಾನ ಇದ್ದ ಕಾಲ ಅದು.ಬಹುಶಃ ನನಗಾಗ ಆರೇಳು ವರ್ಷ ಇದ್ದಿರಬಹುದು.ಆ ಅನಾಥಾಶ್ರಮ ನನ್ನನ ಶಾಶ್ವತವಾಗಿ ಮುಪ್ಪಿಗೇರ್ಸಕ್ಕಿಂತ ಕೆಲ ವಾರ ಅಥವಾ ತಿಂಗಳಿಗೆ ಹಿಂದಿನ ಮಾತು ಇದು.ಪ್ರತಿ ಮುಂಜಾನೆ ಬಲಮಗ್ಗಲಲ್ಲಿ ಎದ್ದು,ಒಬ್ಬ ಸಿಪಾಯಿಯ ಹಾಗೆ ಹಾಸಿಗೆಯನ್ನು ಮಡಿಮಾಡಿ,ನೇರ ಮೈದಾನದಲ್ಲಿ ಸಾಲು ಸಾಲಾಗಿ ಗಂಜಿಗೆ ನಿಲ್ಲುತ್ತಿದೆ. ಆ ಶನಿವಾರದ ದಿನ ಟಿಫನ್ ಮಾಡಿ ಮತ್ತೆ ನನ್ನ ಕೊಠಡಿಗೆ ಬಂದು ಇನ್ನೇನು ಕೂರಬೇಕು, ಅಷ್ಟ್ರಲ್ಲಿ ನಮ್ಮ ವಾರ್ಡನ್ ಒಂದು ಹಿಂಡು ರಾಜಾಚಿಟ್ಟೆಗಳನ್ನ ಅಟ್ಟಿಸಿಕೊಂಡು ಹೋಗಿ ಮೈದಾನದ ಹೊರಗೆ ಅಟ್ಟತಾ ಇದ್ದ. ಅಲ್ಲೆ ಅವಿತುಕಂಡು ನೋಡ್ತಾ ಇದ್ದೆ ನಾನು -- ಈ ಪ್ರಾಣಿ ಏನ್ ಮಾಡ್ಥಾನೆ ಅಂತ.ಒಂದೊಂದಾಗಿ ಆ ಸುಂದರ ಚಿಟ್ಟೆಗಳನ್ನ ನೆಟ್ ಇಂದ ತೆಗೆದು ಅವುಗಳ ತಲೆ, ರೆಕ್ಕೆಗಳಿಗೆ ಪಿನ್ನ್ ಗಳನ್ನು ಚುಚ್ಚಿ ಶಿಲುಬೇಗೆ ಏರಿಸ್ತಾ ಇದ್ದ ಆ ಪಾಪಿ. ಒಂದು ಕಾರ್ಡ್ಬೋರ್ಡ್ ತುಂಬ ಅರೆಬರೆ ಸತ್ತ ಚಿಟ್ಟೆಗಳನ್ನ ಸಿಕ್ಕಿಸಿಟ್ಟಿದ್ದ.ಅಷ್ಟು ಸುಂದರವಾಗಿರೋದನ್ನ ಹೇಗಾದರು ಕೊಲ್ಲೋಕ್ಕೆ ಮನಸ್ಸುಬಂತೋ ಆ ದೂರ್ತಂಗೆ! ಆ ಮುರಿದ ರೆಕ್ಕೆಗೆ ನನ್ನ ಉಗುಳು ಹಚ್ಚಿ ಅಂಟು ಹಾಕಕ್ಕೆ ನೋಡಿದೆ.ಮತ್ತೆ ಅದು ಹಾರಿ ಹೋಗಿ ನೀಲಾಕಾಶ ಸೇರಲಿ ಅಂತ.ಆದರೆ ರೆಕ್ಕೆ ಮತ್ತೆ ಅಂಟಲೇ ಇಲ್ಲ. ಅಷ್ಟರಲ್ಲಿ ನನ್ನ ತಲೆಯ ಮೇಲೆ ಏನೋ ಬಡಿದಹಾಗೆ ಆಯ್ತು.ತಲೆ ಎತ್ತಿ ನೋಡಿದರೆ ಆ ರಾಕ್ಷಸ ಬಂದು ನಿಂತಿದ್ದ.ಅದೆ ಕಾರ್ಡಬೋರ್ಡನ್ನ ತಗೆದು ನನ್ನ ತಲೆಗೆ ಎರೆಡು ಏಟು ಹಾಕಿ ಅರಚಾಡಿದ.ನಾನು ಏನೂ ಮಾಡಿಲ್ಲ ಅಂತ ಎಷ್ಟು ಹೇಳಿದರೂ ನನ್ನನ ನಂಬಲಿಲ್ಲ. ತಲೆಗೆ ಹೊಡೆದ ರಭಸದಲ್ಲಿ ಚಿಟ್ಟೆ ತುಂಡುಗಳೆಲ್ಲ ಚಲ್ಲಾಪಿಲ್ಲಿಯಾದ್ವು.ಅಲ್ಲಿ ಬಿದ್ದಿದ್ದ ಕಸವನ್ನ ಎತ್ತಿ ಕಸದತೊಟ್ಟಿಗೆ ಹಾಕಿ ಬರಲು ಹೇಳಿ ಅವನು ಹೋರಟು ಹೋದ.ಅಲ್ಲಿದ್ದ ರಾಶಿಯಲ್ಲಿ ಬಹಳ ಹೊತ್ತು ಕೂತು ಎಲ್ಲ ಚಿಟ್ಟೆಗಳನ್ನು ಮತ್ತೆ ಒಟ್ಟಿಗೆ ಜೋಡಿಸಿ ಒಮ್ಮೆಲೆ ಮಣ್ಣು ಮಾಡುವ ಎಂದು ಯೋಚ್ಸಿದೆ.ಆದರೆ ಆಗಲಿಲ್ಲ.ಅವುಗಳ ಸಲುವಾಗಿ ಪ್ರಾರ್ಥನೆ ಮಾಡಿ ನನ್ನ ಹಳೆ ಚೀಲದಲ್ಲಿ ಹಾಕಿ ಮಣ್ಣು ಮಾಡಿದೆ.ಪ್ರತಿವರುಷವೂ ಚಿಟ್ಟೆಗಳು ನಮ್ಮ ಅನಾಥಾಲಕ್ಕೆ ಬಂದಾಗ ನಾನೇ ಅವುಗಳನ್ನು ಹೊರದೂಡುವೆ.ಈ ಸ್ಥಳ ಬದುಕುವುದಕ್ಕೆ ಒಳ್ಳೆಯದಲ್ಲ -- ಸಾಯುವುದಕ್ಕಂತು ಅಲ್ಲವೇ ಅಲ್ಲ ಅನ್ನುವುದು ಆ ಬಡಪಾಯಿಗಳಿಗೆ ಇನ್ನು ತಿಳಿದಿಲ್ಲ.