Tuesday, December 29, 2009

ರಸಋಷಿಗೆ ಶ್ರೀಸಾಮಾನ್ಯನ ನಮನ


ಶ್ರೀಸಾಮಾನ್ಯ, ನೇಗಿಲಯೋಗಿ , ಬೆಳ್ಳಿಹಬ್ಬ, ಸುತ್ತೋಲೆ - ದಿನನಿತ್ಯದ ಬಳಕೆಯ ಈ ಪದಗಳಲ್ಲಿ ಒಂದು ಸೋಜಿಗದ ಸ್ವಾರಸ್ಯವಿದೆ. ಅದೇನೆಂದು ನಿಮಗೆ ಗೊತ್ತೇ? ಈ ಪದಗಳನ್ನು ಕನ್ನಡಕ್ಕೆ ನೀಡಿದವರು ಕುವೆಂಪು.ಇವೆಲ್ಲ ಪದಸೃಷ್ಟಿಗಳ ಜನಕನಿಗಿಂದು ಜನುಮದಿನ. ಈ ಬ್ಲಾಗಿನಲ್ಲಿ ಶ್ರೀಸಾಮನ್ಯನೆಂದು ನಾಮಕರಣ ಮಾಡಿಕೊಂಡಿರುವ ನಾನು ಪದಜನಕನಿಗೆ ಶ್ರದ್ಧಾಂಜಲಿ ಕೊರಲೇ ಬೇಕಲ್ಲವೇ.

ಕುವೆಂಪು ಅವರ ವಿಶ್ವಮಾನವ ಸಂದೇಶ

ಮನುಜ ಮತ , ವಿಶ್ವ ಪಥ, ಸರ್ವೋದಯ, ಸಮನ್ವಯ ಪೂರ್ಣದೃಷ್ಟಿ ಈ ಪಂಚಮಂತ್ರ ಇನ್ನು ಮುಂದಿನ ದೃಷ್ಟಿಯಾಗಬೇಕಾಗಿದೆ. ಅಂದರೆ, ನಮಗೆ ಬೇಕಾದುದು ಆ ಮತ ಈ ಮತ ಅಲ್ಲ; ಮನುಜ ಮತ. ಆ ಪಥ ಈ ಪಥ ಅಲ್ಲ; ವಿಶ್ವಪಥ. ಆ ಒಬ್ಬರ ಉದಯ ಮಾತ್ರವಲ್ಲ; ಸರ್ವರ ಸರ್ವಸ್ತರದ ಉದಯ. ಪರಸ್ಪರ ವಿಮುಖವಾಗಿ ಸಿಡಿದು ಹೋಗುವುದಲ್ಲ; ಸಮನ್ವಯಗೊಳ್ಳುವುದು. ಸಂಕುಚಿತ ಮತದ ಆಂಶಿಕ ದೃಷ್ಟಿಯಲ್ಲ; ಭೌತಿಕ ಪಾರಮಾರ್ಥಿಕ ಎಂಬ ಭಿನ್ನ ದೃಷ್ಟಿಯಲ್ಲ; ಎಲ್ಲವನ್ನು ಭಗವದ್ ದೃಷ್ಟಿಯಿಂದ ಕಾಣುವ ಪೂರ್ಣದೃಷ್ಟಿ