Saturday, February 12, 2011

ಶ್ರೀಕರ ಆಮೋದಿನಿ




ನಂಜನಗೂಡಿನ ಸದ್ವೈದ್ಯಶಾಲಾ ಕರುನಾಡಿನಲ್ಲಿ ಮನೆಮಾತು. ಆಯುರ್ವೇದ-ಪ್ರಕೃತಿಚಿಕಿತ್ಸೆಗಳನ್ನು ಮನೆಮನೆಗೆ ತಲಪಿಸುವಲ್ಲಿ ಶ್ರೀಯುತರಾದ ಬಿ.ವಿ.ಪಂಡಿತರ ಸೇವೆ ಮಹತ್ತರವಾದುದು. ಸದ್ವೈದ್ಯಶಾಲೆಯಿಂದ ಗಾಯಕ-ವಾಚಕ ವರ್ಗಕ್ಕೆ ವರದಾನದಂತಿರುವುದು ಶ್ರೀ ಕರ ಆಮೋದಿನಿ . ಆಮೋದಿನಿಯ ಗುಳಿಗೆ ಸೇವಿಸುವುದರಿಂದ ಧ್ವನಿ ತೆರೆದು ಕೊಳ್ಳುತ್ತದೆ. ಕಚೇರಿಯ ಅಥವಾ ಪ್ರವಚನದ ಮುಂಚೆ ಒಂದು ಗುಳಿಗೆ ಬಾಯಿನಲ್ಲಿ ಹಾಕಿಕೊಂದರೆ ಸುಮಾರು ಹೊತ್ತು ಹಾಡಿ-ಮಾತನಾಡಿದರು ಗಂಟಲಿನಲ್ಲಿ ಆಯಾಸ ಅಥವಾ ನೋವು ತಿಳಿಯುವುದಿಲ್ಲ. ಅದಲ್ಲದೆ ಸ್ವರವು ಸರಿಯಾಗಿ ಹೊರಹೊಮ್ಮುವಂತೆ ಸಹಕಾರವನ್ನೀಯುತ್ತದೆ. ಆದ್ದರಿಂದಲೆ ಬಹಳಷ್ಟು ಗಾಯಕರ ಕೈಚೀಲಗಳಲ್ಲಿ ಆಮೋದಿನಿ ಶೋಭಿಸುತ್ತಿರುತ್ತದೆ. ಮಧುಕ, ಕುಂಕುಮಕೇಸರ ಗಳನ್ನೊಳಗೊಂಡ ಶ್ರೀಕರ ಆಮೋದಿನಿ ಸ್ವರಬೇಧ, ಸ್ವರಭಂಗ, ನಾಸಗಥ ರೋಗ, ಗಲರೋಗಗಳಿಗೆ ರಾಮಬಾಣ.
ಶ್ರೀಕರ ಆಮೋದಿನಿ - ಗಾಯಕ ವಾಚಕರ ಪಾಲಿನ ಸಂಜೀವಿನಿ.

Friday, February 11, 2011

ಒಂದು ಹಂತದ ನಂತರ

ತೃಪ್ತಿ ತರಿಸದ
ಸಾವಿರಾರು ಸಾಧನೆಗಳನು
ಹೇರಿ, ಗುಡ್ಡೆ ಹಾಕಿಕೊಂಡ ನಂತರ...

ತಿದ್ದಿಕೊಳಲು ಸಾಲ್ಗಟ್ಟಿ ನಿಂದ ಹಿಂದಿನ
ಸೋಲುಗಳ ಸರಪಳಿಯ ನಡುವಿರುವ ಅಂತರ ....

ಮುಂಬರುವ ಸೋಲುಗಳನು
ಮುತುವರ್ಜಿಯಿಂದ ಆಯ್ದು, ಹೆಕ್ಕಿ
ಸೋಲನಪ್ಪಿಕೊಳಲು ಸಜ್ಜಾಗುತಿರುವೆವೆ ನಿರಂತರ ? ..
ಒಂದು ಹಂತದ ನಂತರ... ಒಂದು ಹಂತದ ನಂತರ