
ಈಗೊಮ್ಮೆ ತತ್ತಕ್ಷಣ ಈ ಭಾಷೆಯನು
ಅರ್ಥೈಸಿಕೊಳ್ಳವ ಪ್ರಯತ್ನ ಬಿಟ್ಟು --
ಸುತ್ತ ಆವರಿಸಿದ ರಕ್ತ ಸ್ನಿಗ್ದ
ಗಾಳಿಗೆ ಮಾತನಾಡಲು ಅನುವು ಮಾಡಿಕೊಟ್ಟು,
ಮತ್ತಷ್ಟೂ ಕಿವಿಗಳು ದಂಗೆದ್ದು
ನಮ್ಮ ನಿನ್ನೆಯ ಬುಡ-ಬೇರುಗಳನ್ನು
ಗಟ್ಟಿಯಾಗಿಸುವ ತನಕ.
ಮೂಕ ಜಡ ವಾಸ್ತವಕ್ಕೆ
ಜಂಗಮ ವಾಗ್ಝರಿಯನೇಕೆ ಆರೋಪಿಸಲಿ?
ಬಳಸದ ಬಾಯ್ಗಳ ತುಕ್ಕುಗಟ್ಟಿದ ತುಟಿಗಳಿಗೇಕೆ
ಸಂಧಾನದ ಪಾರುಪತ್ಯವನ್ನೀಯಲಿ?
ಒಳಿತನೆಲ್ಲವ ಹೊರದೂಡಿ ನಡೆವ
ಕಿವುಡು ಕಿವಿಗಳಿಗಾವ ಮಹತ್ವವನೀಯಲಿ?
ಸಾಕು.
ಇನ್ನರ್ಥೈಸುವ ಗೀಳಿಗಿತ್ತಾಯ್ತು ತರ್ಪಣ.
ಗಂಟುಹಾಕಿದ ಹುಬ್ಬು ಮೋರೆಯ
ದಂಗೆದ್ದ ಕಿವಿಳಿಂತಿರಲಿ.
ಬರಡು ಬರಡಾದ ಹೃದಯಗಳಿಗೆನೆನ್ನುವಿರಿ?
0 comments:
Post a Comment