Friday, October 28, 2011

ನೀರವ



ಒಕ್ಕಣ್ಣ ಝೇನ್ ಗುರು ಶೋಇಚಿ ದಿವ್ಯಪ್ರಭೆಯಿಂದ ತೇಜೋಮಯವಾಗಿ ಶೋಭಿಸುತ್ತಿದ್ದ. ತೋಫ಼ುಕು ದೇವಳದಲ್ಲಿ ತನ್ನ ಶಿಷ್ಯರಿಗೆ ದೀಕ್ಷೆಯನ್ನೀಯುತ್ತಿದ್ದನು. ದಿನ-ರಾತ್ರಿಯೆನ್ನದೆ ದೇವಳದಲ್ಲಿ ಮೌನವಾವರಿಸಿತ್ತು. ಸುತ್ತಲೂ ಪ್ರಶಾಂತ ಮೌನ. ಮಂತ್ರ ಪಠನವನ್ನೂ ಸಹ ಗುರುಗಳು ನಿಷೇಧಿಸಿದ್ದರು. ಧ್ಯಾನವಲ್ಲದೆ ಶಿಷ್ಯರಿಗೆ ಅನ್ಯ ಶ್ರಮವಿಲ್ಲ. ಹೀಗಿರಲು, ಒಂದಾನೊಂದು ದಿನ, ಬಹುಕಾಲದ ಗುರುಗಳ ನೆರೆಯವನೆನಿಸಿದ ವೃದ್ಧನಿಗೆ ದೇವಾಲಯದಿಂದ ಘಂಟಾನಾದ ಮತ್ತು ಸೂತ್ರಪಠನದ ಧ್ವನಿ ಕೇಳಿ ಬಂತು. ಗುರುಗಳು ಹೊರಟರೆಂದು ಆತನರಿತನಷ್ಟೆ!