Tuesday, November 29, 2011

ಇಂದಿನ ದಿನವೇ ಶುಭ ದಿನವು

ಯಾವತ್ ಸ್ವಸ್ಥಮಿದಂ ದೇಹಂ ಯಾವನ್ಮೃತ್ಯುಶ್ಚ ದೂರತಃ |
ತಾವದಾತ್ಮಹಿತಂ ಕುರ್ಯಾತ್ ಪ್ರಾಣಾಂತೇ ಕಿಂ ಕರಿಷ್ಯಸಿ ||
-- ಸುಭಾಷಿತರತ್ನಭಂಡಾರಗಾರ

ಒಳ್ಳೆಯ ಕೆಲಸ ಮಾಡಲು ಮೀನ-ಮೇಷ ಎಣಿಸುವುದೇಕೆ? ಶಕ್ತಿ ಇರುವಾಗಲೇ ಸದ್ಕಾರ್ಯಗಳಲ್ಲಿ ತೊಡಗಿಸಿಕೊಳ್ಳ ಬೇಕು. ಸಂಸಾರ ತಾಪತ್ರಯಗಳು ಯಾರೊಬ್ಬರನ್ನು ಬಿಟ್ಟಿಲ್ಲ; ಹೀಗಿರುವಾಗ ಸರ್ವರಿಗೂ ಹಿತವನ್ನುಂಟು ಮಾಡುವ ಕೆಲಸಗಳಲ್ಲಿ ನಮ್ಮನ್ನು ನಾವು ತೊಡಗಿಸಿಕೊಂಡರೆ ಒಳಿತಲ್ಲವೆ. ನಾಳೆ, ನಾಳೆಯೆಂದು ಬಾರದ ನಾಳೆಗೆ ಮಹೋನ್ನತ ಕಾರ್ಯಗಳಾನ್ನು ಬದಿಗೊತ್ತಿ, ನಗಣ್ಯವಾದ ದೈನಂದಿನ ಚಟುವಟಿಕೆಯಲ್ಲಿ ತಳ್ಳಣಿಸುವುದು ಯಾವ ನ್ಯಾಯ ಹೇಳಿ?