Thursday, December 27, 2012

ಎನಿತು ಧನ್ಯನೋ ಪಾರ್ಥ!

ಒಮ್ಮೆ ಇಂದ್ರನು ಶ್ರೀ ಕೃಷ್ಣನನ್ನು ಕುರಿತು ಒಂದು ವರವನ್ನು ಪ್ರದಾನ ಮಾಡುವುದಾಗಿ ಹೇಳಿದನು.ಏನು ವರವನ್ನೀಯಲಿ ಎಂದು ವಜ್ರಾಯುಧಧರನು ಮುರಾರಿಯನ್ನು ಕೇಳಲಾಗಿ, ಇಂದ್ರನ ಪುತ್ರನಾದ ಅರ್ಜುನನ ಶಾಶ್ವತ ಸಖ್ಯವನ್ನು ಬೇಡಿದನಂತೆ ಮುರವೈರಿ. ಸಕಲ ಚರಾಚರರ ಒಡೆಯ, ಮುನಿಸಂಕುಲವೆಲ್ಲ ಮೂರು ಕಾಲ ಭಜಿಸುವ ಸ್ವಾಮೀ ತಾನು ಅರ್ಜುನನ ಸ್ನೇಹಕ್ಕೆ ಹಾತೊರೆಯುವುದಾದರೆ, ಎನಿತು ಧನ್ಯನೋ ಪಾರ್ಥ!


Wednesday, November 28, 2012

ಬಿಟ್ಟು ಹೊರಟಿಹ ಠಕ್ಕ





ಬಿಟ್ಟು ಹೊರಟಿಹ ಠಕ್ಕ
ಕಿಟಕಿಯಿಂದಲಿ ಕಾಂಬ
ನಭದೆ ಹೊಳೆಯುವ ಶಶಿಯ

ಝೆನ್ ಕವಿಗಳು ಚಂದ್ರನನ್ನು ಜಾಗೃತ ಚಿತ್ತಕ್ಕೆ ಪ್ರತಿಮೆಯಾಗಿ ಬಹಳಷ್ಟು ಬಾರಿ ಬಳಸುವುದುಂಟು. ಝೆನ್ ಗುರು ರಯೋಕನ್ ಒಮ್ಮೆ ತನ್ನ ಗುಡಿಸಲಿಗೆ ಬಂದಾಗ ಕಳ್ಳನೊಬ್ಬ ಗುಡಿಸಲಿನಲ್ಲಿ ಇದ್ದ ಎಲ್ಲ ವಸ್ತುಗಳನ್ನು ದೋಚಿ ಓಡಿಹೋಗುತ್ತಿದ್ದ. ಅವಸರದಲ್ಲಿ ಒಂದು ಪೀಠವನ್ನು ಉಳಿಸಿ ಓಡಿದನಂತೆ. ಮನೆಯ ಒಳಗೆ ಬಂದ ಝೆನ್ ಗುರು ಆ ಪೀಠವನ್ನೂ ಹೊತ್ತು, ಕಳ್ಳನನ್ನು ಹಿಂಬಾಲಿಸಿ , ಅವನಿಗೆ ಕೊಟ್ಟು ಬಿಟ್ಟನಂತೆ. ಎಲ್ಲವನ್ನೂ ದೋಚಿದರು ಸಹ ಕಿಟಕಿಯಲ್ಲಿ ಬೋಧಿಯ ಸ್ವರೂಪವಾದ ಚಂದ್ರನನ್ನು ದೊಚಲಾದೀತೇ? ಈ ಸಂದರ್ಭದಲ್ಲಿ ಬರೆದ ಹೈಕು ಇದಾಗಿದೆ.

The thief left it behind:
the moon
at my window

Sunday, October 28, 2012

ವಿಜ್ಞಾನ ಮತ್ತು ಕಲೆ


ಭಾರತದ ಪರಮಾಣು ಪಿತಾಮಹ ರೆಂದು ಖ್ಯಾತರಾಗಿರುವ ಹೋಮಿ ಜೆಹಾಂಗೀರ್ ಭಾಭಾ ಅವರು ದೇಶ ಕಂಡ ಮಹಾನ್ ವಿಜ್ಞಾನಿಗಳಲ್ಲಿ ಒಬ್ಬರು. ವಿಜ್ಞಾನ-ತಂತ್ರಜ್ಞಾನವೇ ಅಲ್ಲದೆ, ಭಾಭಾ ಅವರು ಉತ್ತಮ ಆಡಳಿತಕಾರರಾಗಿ ಸಹ ಭಾರತಕ್ಕೆ ಕೊಡುಗೆ ನೀಡಿದರು.ಭಾಭಾ ಅಣು ಸಂಶೋಧನಾ ಕೇಂದ್ರ,ಟಾಟಾ ಮೂಲ ವಿಜ್ಞಾನ ಸಂಶೋಧನಾ ಕೇಂದ್ರ ಮುಂತಾದ ಉನ್ನತ ಮಟ್ಟದ ಸಂಸ್ಥೆಗಳನ್ನೂ ಹುಟ್ಟುಹಾಕಿದರು. ೧೯೬೬ ರಲ್ಲಿ ಭಾಭಾ ಅವರ ಅಕಾಲಿಕ ಮರಣ ಸಂಭವಿಸಿದಾಗ ಕಲಾ ಪೋಷಕರಾದ ವಾನ್ ಲೆಯ್ದೆನ್ ಅವರು -- "ಭಾರತದ ಕಲಾ ಪ್ರಪಂಚ ಅನಾಥ ವಾಯಿತು" ಎಂದು ಉದ್ಗರಿಸಿದರು. ಇದೇನು, ಮೇಲು ದರ್ಜೆಯ ವಿಜ್ಞಾನಿ ಇಲ್ಲವಾದರೆ ಕಲಾ ಸಾಮ್ರಾಜ್ಯ ಹೇಗೆ ಬಡವಾಯಿತು ಎಂದು ಪ್ರಶ್ನಿಸಬಹುದು. ಸ್ವಾರಸ್ಯದ ಸಂಗತಿಯೆಂದರೆ ಭಾಭಾ ಅವರ ಬುದ್ಧಿ - ಜ್ಞಾನಗಳು ವಿಜ್ನಾನಿಯದ್ದಾದರೆ, ಹೃದಯವು ಮಾತ್ರ ಅಪ್ಪಟ ಕಲಾವಿದನದ್ದು, ಸಹೃದಯನದ್ದು. ಸರ್. ಸಿ. ವಿ. ರಾಮನ್ ಅವರು ಭಾಭಾರನ್ನು ಲಿಯೋ ನಾರ್ಡೋ ಡಾ ವಿಂಚಿ ಗೆ ಹೋಲಿಸಿದರು. ಹೋಲಿಕೆ ಅತ್ಯಂತ ಸಮಜಸವಾಗಿದೆ. ಡಾ ವಿಂಚಿ ಯಂತೆ ಭಾಭಾ ಸಹ ಬಹುಮುಖ ಪ್ರತಿಭೆ. ಭಾಭಾ ಅವರು ಫಿಲ್ ಹಾರ್ಮಾನಿಕ್ ಆರ್ಕೆಸ್ತ್ರದಲ್ಲಿ ( ವಾದ್ಯ ಗೋಷ್ಠಿ ಯಲ್ಲಿ ) ವಯೋಲಾ ನುಡಿಸುತ್ತಿದ್ದರು. ಕೇಂಬ್ರಿಡ್ಜ್ ನ ನೌಕಾ ತಂಡದಲ್ಲಿ ( ರೆಗಟ್ಟ) ದಲ್ಲಿ ದೋಣಿ ನಡೆಸುವ ಅಂಬಿಕರಾಗಿದ್ದರು, ಇದಲ್ಲದೆ ಮೊಜಾರ್ಟ್ ನ ' ದಿ ಮ್ಯಾರೇಜ್ ಆಫ್ ಫಿಗಾರೊ' ರೂಪಕಕ್ಕೆ ರಂಗ ಸಜ್ಜಿಕೆ ಮತ್ತು ಕುಂಚ ಹಿಡಿದಿದ್ದರು . ವಿಜ್ಞಾನಿಯಾಗಿ ಪರಮಾಣುಗಳ ಒಳಹೊಕ್ಕು ಬೇಧಿಸಿದ ಭಾಭಾ, ಕಲಾವಿದನಾಗಿ ಆಂತರ್ಯದ
ಹೃದಯದಾಳವನ್ನು ಶೋಧಿಸಿದರು. ಕವಿಹೃದಯಿ ಭಾಭಾ ಒಮ್ಮೆ ಹೀಗೆಂದಿದ್ದರು
ನನ್ನ ಜೀವಿತದ ಅವಧಿಯನ್ನು ಕಾಲ ಪರಿಮಿತಿಯಿಂದ ಹೆಚ್ಚಿಸಿಕೊಳ್ಳಲಾದು, ಆದರೆ ತೀವ್ರತೆಯನ್ನು ವೃದ್ಧಿಸುವುದರಿಂದ ಅದನ್ನು (ಜೀವಿತವನ್ನು) ವೃದ್ದಿ ಸಿ ಕೊಳ್ಳುತ್ತೇನೆ. ಕಲೆ, ಸಂಗೀತ, ಕಾವ್ಯ - ಇವುಗಳ ವ್ಯವಸ್ಥಿತಿಗಳಿಂದ ನನ್ನ ಒಂದೇ ಧ್ಯೇಯವೆಂದರೆ - ಕಲಾವ್ಯವಸ್ಥಿತಿ ಯಿಂದ ಜೀವನ ತೀವ್ರತೆಯ ಅನುಸಂಧಾನ

Sunday, September 30, 2012

ಪುಟ್ಟಿ

ಶಿಶುವಿಹಾರದಲ್ಲಿ ಚಿಣ್ಣರೆಲ್ಲರೂ ಬಣ್ಣದ ಬಳಪಗಳನ್ನು ಹಿಡಿದು ಚಿತ್ರ ಬಿಡಿಸುವುದರಲ್ಲಿ ಮಗ್ನರಾಗಿದ್ದರು. ಸವಿತಾ ಟೀಚರ್ ತರಗತಿಯನ್ನು ಸುತ್ತು ಹಾಕುತ್ತ, ಯಾವ ಮಗುವಿನ ಕುಂಚ ಏನನ್ನು ಅವತರಿಸುತ್ತಿದೆ ಎಂದು ನೋಡುತ್ತಿದ್ದರು . ಪುಟ್ಟಿಯ ಪಕ್ಕ ನಿಂತು "ಇದೇನು ಪುಟ್ಟಿ, ಏನು ಬಿಡಿಸುತ್ತಿದೀಯ?" ಎಂದ ಕೇಳಿದರು. "ದೇವರನ್ನು ಬಿದುಸುತ್ತಿದೀನಿ" ಎಂದಳು ಪುಟ್ಟಿ. ಆದರೆ ಯಾರೂ ದೇವರನ್ನು ನೋಡಿಯೇ ಇಲ್ಲವಲ್ಲ ಎಂದರು ಸವಿತಾ ಟೀಚರ್ . "ಶ್ ! .. ಇನ್ನು ಕೆಲವೇ ನಿಮಿಷಗಳಲ್ಲಿ ಎಲ್ಲರು ನೋಡುವರು ಎಂದಳು ಮುಗ್ಧ ಪುಟ್ಟಿ.

Thursday, August 30, 2012

ಆನಂದಂ ಬ್ರಹ್ಮ




ಸಕಲ ಜೀವ ರಾಶಿಗಳು ಅನುಗಾಲ ಆರಿಸುವುದು ಆನಂದವನ್ನೇ. ನಮ್ಮ ಬಹುತೇಕ ಎಲ್ಲ ಚಟುವಟಿಕೆಗಳು ಸುಖ ಸಂಪಾದನೆಯ ಸುತ್ತ ಮುತ್ತಲೇ ಇರುತ್ತವೆ. ಎಲ್ಲವನ್ನು ಬಿಟ್ಟು ಸರ್ವಸಂಘ ಪರ್ತ್ಯಾಗಿ ಆಗಬಯಸುವ ಸನ್ಯಾಸಿಯೂ ಸಹ ಸರ್ವ ತ್ಯಾಗದಿಂದ ತನಗೆ ಸಂತೋಷ ನೆಮ್ಮದಿಗಳು ದೊರೆಯುವುದರಿಂದಲೇ ತ್ಯಾಗಾಸಕ್ತನಾಗುವುದು. ಸುಖ ಒಂದೇ ಜೀವನದ ಮೌಲಯ ಎಂದು ಪರಿಗಣಿಸಿ ಅತಿಯಾದ ವಿಷಯಾಸಕ್ತಿಯಲ್ಲಿ ತೊಡಗಿದರೆ ಅದನ್ನು 'ಹೆಡೋನಿಸಂ' (Hedonism) ಎಂದು ಕರೆಸಿಕೊಂಡರೆ, ಧರ್ಮ ವಿರುದ್ಧವಲ್ಲದ ಸರ್ವಭೂತ ಹಿತೋರಥದ ಸಂತೋಷ- ಸುಖದ ಅರಸಿವಿಕೆ ಹಂತ ಹಂತವಾಗಿ ಬ್ರಹ್ಮಾನಂದ ವನ್ನು ಸಹ ದೊರಕಿಸಿ ಕೊಡುತ್ತದೆ. ನಾ ನಾ ವಿಧವಾದ ಆನಂದ ಮೀಮಾಂಸೆ ಸನಾತನ ಧರ್ಮದಲ್ಲಿ ಇದ್ದು ಆನಂದವನ್ನು ಬ್ರಹ್ಮ ವಸ್ತುವಿಗೆ ಹೋಲಿಸಿದ್ದಾರೆ ನಮ್ಮ ಸನಾತನರು. ಪ್ರಚಲಿತ ಮನೋವಿಜ್ಞಾನಿ ಗಳಲ್ಲಿ ಮಾರ್ಟಿನ್ ಸಲಿಗ್ಮನ್ (Martin Seligman) ಅವರು ಆನಂದದ ಮೂಲವನ್ನು ಹುಡುಕಲು ಹೊರಟು 'PERMA' ಎಂಬ ಪಂಚಾಕ್ಷರ ಸೂತ್ರವನ್ನು ಪ್ರತಿಪಾದಿಸಿದರು. ಈ ಐದು ಬಗೆಯ ಸುಖಪ್ರದ ಸಾಧನಗಳಲ್ಲಿ "ವಸ್ತು ಜನ್ಯ ಸುಖ" - Pleasure ಮೊದಲನೆಯದು. ಈ ವಸ್ತು ಜನ್ಯ ಸುಖ, ಪಂಚೆದ್ರಿಯಗಳಿಗೆ ಮುದದಿಂದ ಉಂಟಾಗುತ್ತದೆ. ಇಂಪಾದ ಗಾನ ಲಾಲಿಸುವುದಾಗಲಿ, ಘಮ ಘಮಿಸುವ ಸುಗಂಧ ದ್ರವ್ಯದ ಸುವಾಸನೆಯಾಗಲಿ , ಸುಗ್ರಾಸ ಭೋಜನದಿಂದಾಗಲಿ , ಇವೆ ಮೊದಲಾದ ವಸ್ತುಜನ್ಯ ಸಂತೋಷವು ಇಲ್ಲಿ ಸೇರಿಕೊಳ್ಳುತ್ತವೆ. "ವ್ಯವಸ್ಥಿತಿ" - Enagagement ಇಂದ ದೊರೆಯುವ ಸಂತಸ ಎರಡನೆಯ ಸ್ತರದ್ದಾಗಿರುತ್ತದೆ. ನಾವು ಮಾಡುವ ಕೆಲಸದಲ್ಲಿ ಶ್ರದ್ದೆ, ಉತ್ಸಾಹವಿದ್ದು, ಕಾರ್ಯ ತತ್ಪರತೆ ಇಂದ ದೊರೆಯುವ ಸಂತಸ ಇದಾಗಿರುತ್ತದೆ. ಸಂಪೂರ್ಣವಾಗಿ ಮಗ್ನವಾಗಿ ತನು, ಮನ , ಆತ್ಮಗಳನ್ನು ಒಂದು ಮಾಡಿ ಸಂಪೂರ್ಣವಾಗಿ ತೊಡಗಿಸಿ ಕೊಂದ ಮಾಡಿದ ಕೆಲಸದ ಸಂತಸವೇ ಸಂತಸ. ಸರ್ ಎಂ. ವಿಶ್ವೇಶ್ವರಯ್ಯ ನವರು ಹೇಳುತ್ತಿದ್ದಂತೆ " ಕಸ ಗುಡಿಸುವುದು ನಮ್ಮ ಕೆಲಸವಾದರೆ, ನಾವು ಗುಡಿಸಿದ ರಸ್ತೆ ಜಗತ್ತಿನಲ್ಲೇ ಅತ್ಯಂತ ಸ್ವಚ್ಛ ವಾಗಿರುವ ರಸ್ತೆಯಾಗ ಬೇಕು -- ಹಾಗಿರಬೇಕು ನಮ್ಮ ಕಾರ್ಯ ಶ್ರದ್ದೆ. Relationship - "ಸಂಬಂಧ-ಬಾಂಧವ್ಯ" ಗಳಿಂದ ಪ್ರಾಪ್ತಿಯಾಗುವ ಸಂತೋಷ ಮೂರನೆಯದು. ಮಾನವ ಸಮಾಜ ಜೀವಿ. ಯಾರಿಗೆ ಒಳ್ಳೆಯ ಒಡನಾಟ ದೊರೆಯುವುದೋ ಅವರೇ ಪುಣ್ಯವಂತರು. ಸಲಿಗ್ಮನ್ ಗುರುತಿಸುವ ನಾಲ್ಕನೇ ಪಂಕ್ತಿಯ ಸಂತಸ ವೆಂದರೆ "ಅರ್ಥ ಗ್ರಹಣ" - Meaning . ಜೀವನದಲ್ಲಿ ಎಲ್ಲವೂ ಇದ್ದರೂ "ಏನೋ" ಹೇಳಿಕೊಳ್ಳಲಾರದ ತಾಕಲಾಟ. ಉತ್ತರಗಳಿಲ್ಲ ಪ್ರಶ್ನೆಗಳು ಎಲ್ಲರನ್ನು ಒಮ್ಮೆಯಾದರೂ ಕಾದಿರುವುದು ಸಹಜವೇ. ಈ ಮಾಯಮಯವಾದ ಪ್ರಪಂಚದ ಅರ್ಥ ಗ್ರಹಣವೆ ಒಂದು ಸಂತಸ. ಸಂತಸದ ಐದನೆಯ ಮೂಲವೆಂದರೆ Achievement - "ಸಾಧನೆಯ ಸಂತೃಪ್ತಿ". ಎಷ್ಟೇ ಉಟ್ಟರು ಉಂಡರೂ, ಸಂಸಾರದಲ್ಲಿ ಸಾಮರಸ್ಯ ಇದ್ದರೂ, ಸಾಧನೆಯ ಗಂಧ ವಿರದಿದ್ದರೆ ಜೀವನ ನೀರಸವೇ ಸರಿ.


Friday, July 27, 2012

ಕನಕಧಾರಾ ಸ್ತೋತ್ರಂ

ಅಂಗಂ ಹರೇಃ ಪುಲಕ-ಭೂಷಣಮಾಶ್ರಯಂತೀ
ಭೃಂಗಾಗನೇವ ಮುಕುಲಾಭರಣಂ ತಮಾಲಂ |
ಅಂಗೀಕೃತಾಖಿಲವಿಭೂತಿರಪಾಂಗಲೀಲಾ
ಮಾಂಗಲ್ಯದಾಸ್ತು ಮಮ ಮಂಗಲದೇವತಾಯಾಃ ||1||

ಮುಗ್ಧಾಮುಹುರ್ವಿದಧತೀ ವದನೇ ಮುರಾರೇಃ
ಪ್ರೇಮತ್ರಪಾಪ್ರಣಿಹಿತಾನಿ ಗತಾಗತಾನಿ |
ಮಾಲಾ-ದೃಶೋ-ರ್ಮಧುಕರೀವ ಮಹೋತ್ಪಲೇ ಯಾ
ಸಾ ಮೇ ಶ್ರಿಯಂ ದಿಶತು ಸಾಗರ-ಸಂಭವಾಯಾಃ ||2||

ಆಮೀಲಿತಾಕ್ಷಮಧಿಗಮ್ಯ ಮುದಾ ಮುಕುಂದ-
ಮಾನಂದಕಂದಮನಿಮೇಷಮನಂಗತಂತ್ರಂ |
ಆಕೇಕರ-ಸ್ಥಿತ-ಕನೀನಿಕ-ಪಕ್ಷ್ಮ ನೇತ್ರಂ
ಭೂತ್ಯೈ ಭವೇನ್ಮಮ ಭುಜಂಗಶಯಾಂಗನಾಯಾಃ ||3||

ಬಾಹ್ವಂತರೇ ಮಧುಜಿತಃ ಶ್ರಿತಕೌಸ್ತುಭೇ ಯಾ
ಹಾರಾವಲೀವ ಹರಿನೀಲಮಯೀ ವಿಭಾತಿ |
ಕಾಮಪ್ರದಾ ಭಗವತೋsಪಿ ಕಟಾಕ್ಷಮಾಲಾ
ಕಲ್ಯಾಣಮಾವಹತು ಮೇ ಕಮಲಾಲಯಾಯಾಃ ||4||

ಕಾಲಾಂಬುದಾಲಿ-ಲಲಿತೋರಸಿಕೈಟಭಾರೇಃ
ಧಾರಾಧರೇ ಸ್ಫುರತಿ ಯಾ ತಟಿದಂಗನೇವ |
ಮಾತುಃ ಸಮಸ್ತಜಗತಾಂ ಮಹನೀಯಮೂರ್ತಿಃ
ಭದ್ರಾಣಿ ಮೇ ದಿಶತು ಭಾರ್ಗವ-ನಂದನಾಯಾಃ ||5||

ಪ್ರಾಪ್ತಂ ಪದಂ ಪ್ರಥಮತಃ ಖಲು ಯತ್ ಪ್ರಭಾವಾತ್
ಮಾಂಗಲ್ಯಭಾಜಿ ಮಧು-ಮಾಥಿನಿ ಮನ್ಮಥೇನ |
ಮಯ್ಯಾಪತೇತ್ತದಿಹ ಮಂಥರಮೀಕ್ಷಣಾರ್ಧಂ
ಮಂದಾಲಸಂ ಚ ಮಕರಾಲಯಕನ್ಯಕಾಯಾಃ ||6||

ವಿಶ್ವಾಮರೇಂದ್ರ-ಪದವಿಭ್ರಮ-ದಾನದಕ್ಷಂ
ಆನಂದ-ಹೇತುರಧಿಕಂ ಮಧುವಿದ್ವಿಷೋsಪಿ |
ಈಷನ್ನಿಷೀದತು ಮಯಿ ಕ್ಷಣಮೀಕ್ಷಣಾರ್ಧಂ
ಇಂದೀವರೋದರ ಸಹೋದರಮಿಂದಿರಾಯಾಃ ||7||

ಇಷ್ಟಾವಿಶಿಷ್ಟಮತಯೋsಪಿ ಯಯಾ ದಯಾರ್ದ್ರ-
ದೃಷ್ಟ್ಯಾ ತ್ರಿವಿಷ್ಟಪ ಪದಂ ಸುಲಭಂ ಭಜಂತೇ |
ದೃಷ್ಟಿಃಪ್ರಹೃಷ್ಟಕಮಲೋದರದೀಪ್ತಿರಿಷ್ಟಾಂ
ಪುಷ್ಟಿಂ ಕೃಷೀಷ್ಟಮಮ ಪುಷ್ಕರ-ವಿಷ್ಟರಾಯಾಃ ||8||

ದದ್ಯಾದ್ದಯಾನುಪವನೋ ದ್ರವಿಣಾಂಬುಧಾರಾಮ್
ಅಸ್ಮಿನ್ನಕಿಂಚನ-ವಿಹಂಗಶಿಶೌ ವಿಷಣ್ಣೇ |
ದುಷ್ಕರ್ಮ-ಘರ್ಮಮಪನೀಯ ಚಿರಾಯ ದೂರಾತ್
ನಾರಾಯಣ-ಪ್ರಣಯಿನೀ-ನಯನಾಂಬುವಾಹಃ ||9||

ಗೀರ್ದೇವತೇತಿ ಗರುಡಧ್ವಜ-ಸುಂದರೀತಿ
ಶಾಕಂಭರೀತಿ ಶಶಿಶೇಖರ-ವಲ್ಲಭೇತಿ |
ಸೃಷ್ಟಿ-ಸ್ಥಿತಿ-ಪ್ರಲಯಕೇಲಿಷು ಸಂಸ್ಥಿತಾಯೈ
ತಸ್ಯೈ ನಮಸ್ತ್ರಿಭುವನೈಕ-ಗುರೋಸ್ತರುಣ್ಯೈ ||10||

ಶ್ರುತೈ ನಮೋsಸ್ತು ಶುಭಕರ್ಮ-ಫಲಪ್ರಸೂತ್ಯೈ
ರತ್ಯೈ ನಮೋsಸ್ತು ರಮಣೀಯ-ಗುಣಾಶ್ರಯಾಯೈ |
ಶಕ್ಯೈ ನಮೋsಸ್ತು ಶತಪತ್ರ-ನಿಕೇತನಾಯೈ
ಪುಷ್ಟ್ಯೈ ನಮೋsಸ್ತು ಪುರುಷೋತ್ತಮ-ವಲ್ಲಭಾಯೈ ||11||

ನಮೋsಸ್ತು ನಾಲೀಕ-ನಿಭಾನನಾಯೈ
ನಮೋsಸ್ತು ದುಗ್ಧೋದಧಿ-ಜನ್ಮಭೂತ್ಯೈ |
ನಮೋsಸ್ತು ಸೋಮಾಮೃತ-ಸೋದರಾಯೈ
ನಮೋsಸ್ತು ನಾರಾಯಣ-ವಲ್ಲಭಾಯೈ ||12||

ನಮೋsಸ್ತು ಹೇಮಾಂಬುಜ-ಪೀಠಿಕಾಯೈ
ನಮೋsಸ್ತು ಭೂಮಂಡಲನಾಯಿಕಾಯೈ |
ನಮೋsಸ್ತು ದೇವಾದಿ-ದಯಾಪರಾಯೈ
ನಮೋsಸ್ತು ಶಾರ್ಙ್ಗಾಯುಧ-ವಲ್ಲಭಾಯೈ ||13||

ನಮೋsಸ್ತು ದೇವ್ಯೈ ಭೃಗುನಂದನಾಯೈ
ನಮೋsಸ್ತು ವಿಷ್ಣೋರುರಸಿ ಸ್ಥಿತಾಯೈ |
ನಮೋsಸ್ತು ಲಕ್ಷ್ಮ್ಯೈ ಕಮಲಾಲಯಾಯೈ
ನಮೋsಸ್ತು ದಾಮೋದರ-ವಲ್ಲಭಾಯೈ ||14||

ನಮೋsಸ್ತು ಕಾಂತ್ಯೈ ಕಮಲೇಕ್ಷಣಾಯೈ
ನಮೋsಸ್ತು ಭೂತ್ಯೈ ಭುವನಪ್ರಸೂತ್ಯೈ |
ನಮೋsಸ್ತು ದೇವಾಧಿಭಿರರ್ಚಿತಾಯೈ
ನಮೋsಸ್ತು ನಂದಾತ್ಮಜ-ವಲ್ಲಭಾಯೈ ||15||

ಸಂಪತ್ಕರಾಣಿ ಸಕಲೇಂದ್ರಿಯನಂದನಾನಿ
ಸಾಮ್ರಾಜ್ಯದಾನವಿಭವಾನಿ ಸರೋರುಹಾಕ್ಷಿ |
ತ್ವದ್ವಂದನಾನಿ ದುರಿತಾಹರಣೋದ್ಯತಾನಿ
ಮಾಮೇವ ಮಾತರನಿಶಂ ಕಲಯಂತು ಮಾನ್ಯೇ ||16||

ಯತ್ಕಟಾಕ್ಷಸಮುಪಾಸನಾ ವಿಧಿಃ
ಸೇವಕಸ್ಯ ಸಕಲಾರ್ಥಸಂಪದಃ |
ಸಂತನೋತಿ ವಚನಾಂಗಮಾನಸ್ಯೈ-
ಸ್ತ್ವಾಂ ಮುರಾರಿಹೃದಯೇಶ್ವರೀಂ ಭಜೇ ||17||

ಸರಸಿಜನಿಲಯೇ ಸರೋಜಹಸ್ತೇಃ
ಧವಲತಮಾಂಶುಕಗಂಧಮಾಲ್ಯ ಶೋಭೇ |
ಭಗವತಿ ಹರಿವಲ್ಲಭೇ ಮನೋಜ್ಞೆ
ತ್ರಿಭುವನಭೂತಿಕರಿ ಪ್ರಸೀದ ಮಹ್ಯಮ್ ||18||

ದಿಗ್ಘಸ್ತಿಭಿಃ ಕನಕಕುಂಭಮುಖಾವಸೃಷ್ಟ
ಸ್ವರ್ವಾಹಿನೀವಿಮಲಚಾರುಜಲಪ್ಲುತಾಂಗೀಮ್ |
ಪ್ರಾತರ್ನಮಾಮಿ ಜಗತಾಂ ಜನನೀಮಶೇಷ
ಲೋಕಾಧಿನಾಥಗೃಹಿಣೀಮಮೃತಾಬ್ಧಿ ಪುತ್ರೀಮ್ ||19||

ಕಮಲೇ ಕಮಲಾಕ್ಷವಲ್ಲಭೇ ತ್ವಂ
ಕರುಣಾಪೂರತರಂಗಿತೈರಪಾಂಗೈಃ |
ಅವಲೋಕಯ ಮಾಮಕಿಂಚನಾನಾಂ
ಪ್ರಥಮಂ ಪಾತ್ರಮಕೃತ್ರಿಮಂ ದಯಾಯಾಃ ||20||

ಸ್ತುವಂತಿ ಯೇ ಸ್ತುತಿಭಿರಮೀಭಿರನ್ವಹಂ
ತ್ರಯೀಮಯೀಂ ತ್ರಿಭುವನ-ಮಾತರಂ ರಮಾಂ |
ಗುಣಾಧಿಕಾ ಗುರುತರ-ಭಾಗ್ಯ-ಭಾಗಿನಃ
ಭವಂತಿ ತೇ ಭುವಿ ಬುಧಭಾವಿತಾಶಯಾಃ ||21||

~*~*~*~

Credits: http://oppanna.com/


Saturday, June 30, 2012

ಸಂಪ್ರತಿ ವಾರ್ತಾಃ ಶೄಯಂತಾಂ.



ಆಕಾಶವಾಣಿ ಸುದ್ದಿ ವಿಭಾಗದಿಂದ ಪ್ರತಿ ಮುಂಜಾನೆ ೬:೫೫ ಗೆ ಬಿತ್ತರವಾಗುವ ಸಂಸ್ಕೃತ ವಾರ್ತಾ ಪ್ರಸಾರಕ್ಕಿಂದು ೩೮ ವರ್ಷದ ಸಂಭ್ರಮ. ೧೯೭೪ರಲ್ಲಿ ಇದೇ ಜೂನ್ ೩೦ ರಂದು ಬೆಳಗಿನ ಸಂಸ್ಕೃತ ವಾರ್ತಾ ಪ್ರಸಾರ ಮೊದಲುಗೊಂಡಿತು. "ಬಹುಜನಹಿತಾಯ, ಬಹುಜನಸುಖಾಯ" ಎಂಬ ಆಕಾಶವಾಣಿಯ ಘೋಶವಾಕ್ಯ ಈ ಸಂಸ್ಕೃತ ವಾರ್ತೆಗಳಿಗೆ ಅಕ್ಷರಶಃ ಸರಿಹೊಂದುತ್ತದೆ.

ಮುಂಜಾನೆ ಎದ್ದು ಎಂ.ಎಸ್. ಕಂಠಸಿರಿಯಲ್ಲಿ "ಕೌಸಲ್ಯಾ ಸುಪ್ರಜಾ ರಾಮ" ಆಲಿಸಿ , ಬಿಸಿ ತಾಜಾ ಫಿಲ್ಟರ್ ಕಾಫಿ ಹೀರುತ್ತ , ಆಕಾಶವಾಣಿಯಲ್ಲಿ " ಇಯಂ ಆಕಾಶವಾಣಿ, ಸಂಪ್ರತಿ ವಾರ್ತಾಃ ಶೄಯಂತಾಂ , ಪ್ರವಾಚಕಃ ಬಲದೇವಾನಂದ ಸಾಗರಃ" -- ಈ ಉದ್ಘೋಶ ಕೇಳಿದರೆ ಸಾಕು ಆ ದಿನ ಮಂಗಳಮಯವಾಗಿ ಆರಂಭವಾಗುವ ಅನುಭೂತಿ.

ಸಂಸ್ಕೃತ ವಾರ್ತೆಗಳನ್ನು ಅಂತರ್ಜಾಲದಲ್ಲೂ ಕೇಳಬಹುದು. ಕೊಂಡಿ ಇಲ್ಲಿದೆ.

http://www.newsonair.com/NSD-Audio-Bulletins-News-Schedule.asp


ಕಳೆದ ೩೮ ವರ್ಷಗಳಿಂದ ಸಂಸ್ಕೃತ ಪ್ರವಾಚಕರಾಗಿರುವ ಡಾ|| ಬಲದೇವಾನಂದಸಾಗರ ಅವರು.

Monday, May 14, 2012

ಆನಂದಲಹರೀ



ಅಯಃ ಸ್ಪರ್ಶೇ ಲಗ್ನಂ ಸಪದಿ ಲಭತೇ ಹೇಮಪದವೀಂ
ಯಥಾ ರಥ್ಯಾಪಾಥಃ ಶುಚಿ ಭವತಿ ಗಂಗೌಘಮಿಲಿತಮ್ |
ತಥಾ ತತ್ತತ್ ಪಾಪೈಃ ಅತಿಮಲಿನಂ ಅಂತರ್ಮಮ ಯದಿ
ತ್ವಯಿ ಪ್ರೇಮ್ಣಾ ಸಕ್ತಂ ಕಥಮಿವ ನ ಜಾಯೇತ ವಿಮಲಂ ||

ತಾತ್ಪರ್ಯ :  ಸ್ಪರ್ಶಮಣಿಯಿಂದ ಸ್ಪರ್ಶಿಸಿದರೆ ಕಬ್ಬಿಣವು ಬಂಗಾರವಾಗುವುದು; ದಾರಿಯ ಮಗ್ಗಲಿನ ಕೊಳಚೆ ನೀರು ಗಂಗೆಯನ್ನು ಸೇರಿದರೆ ಶುದ್ಧವಾಗುವುದು. ಇದರಂತೆ, ಹೇ ಭವಾನಿ, ನನ್ನ ಹೃದಯವು ಅನೇಕ ಪಾಪಗಳಿಂದ ಅತಿ ಮಲಿನವಾಗಿದ್ದರೂ ಕೂಡ, ನಿನ್ನಲ್ಲಿ ಪ್ರೇಮಸ್ವರೂಪದ ಭಕ್ತಿಯನ್ನು ಪಡೆಯಿತೆಂದರೆ, ಹೇಗೆ ತಾನೇ ನಿರ್ಮಲವಾಗುವುದಿಲ್ಲ? 

Thursday, April 26, 2012

ವಿಶ್ವ ಬೌದ್ಧಿಕ ಸಂಪದ ದಿನಾಚರಣೆ

ವಿಶ್ವದೆಲ್ಲೆಡೆ ಏಪ್ರಿಲ್ ೨೬ ೨೦೧೨ ರಂದು ಬೌದ್ಧಿಕ ಸಂಪದ ದಿನಾಚರಣೆ ಆಚರಿಸಲಾಯಿತು. ವಿಶ್ವ ಬೌದ್ಧಿಕ ಸಂಪದ ಸಂಸ್ಥೆ (World Intellectual Property Organisation: WIPO) ಏಪ್ರಿಲ್ ೨೬ ಅನ್ನು ಜಾಗತಿಕ ಮಟ್ಟದಲ್ಲಿ ಬೌದ್ಧಿಕ ಸಂಪದ ದಿನವನ್ನಾಗಿ ಆಚರಿಸುವ ಕರೆ ನೀಡಿದೆ. ೧೫೦ಕ್ಕೂ ಹೆಚ್ಚು ರಾಷ್ಟ್ರಗಳು ಈ WIPO ಸಂಸ್ಥೆಯ ಸದಸ್ಯರಾಗಿದ್ದು, ಈ ಎಲ್ಲಾ ಸದಸ್ಯ ದೇಶಗಳಲ್ಲೂ ಹೊಸ ಚಿಂತನೆಗಳನ್ನು ಹುಟ್ಟು ಹಾಕುವ ನಿಟ್ಟಿನಲ್ಲಿ ಏಪ್ರಿಲ್ ೨೬ ರಂದು ಕಾರ್ಯಕ್ರಮಗಳು ನಡೆದಿವೆ. ಪ್ರತಿವರ್ಷವೂ ಒಂದು ಮೂಲ ವಿಷಯವನ್ನು ಚರ್ಚೆಗೆ ಆಯ್ದು ಕೊಳ್ಳಲಾಗಿ ಈ ಸಾಲಿನಲ್ಲಿ 'ದ್ರಷ್ಟಾರ ಚಿಂತಕರು' (Visionary Innovators) ಎಂಬ ವಿಷಯವನ್ನು ನಿಗದಿ ಪಡಿಸಲಾಗಿದೆ.

Sunday, March 25, 2012

ವಸಂತೋತ್ಸವ




ವಸಂತ ಬಂದ ಋತುಗಳ ರಾಜಾ ತಾ ಬಂದ! ವಸಂತನ ಆಗಮನ ಎಲ್ಲರಲ್ಲೂ ಸಂತಸ ಮೂಡಿಸಿದೆ. ಉತ್ಸವ ಪ್ರೀಯರಾದ ಭಾರತೀಯರು ವಸಂತ ಋತುವಿಗೆ ಸಂಬಂಧಿಸಿದಂತೆ ಆಚರಿಸುವ ಹತ್ತು ಹಲವು ಪರ್ವಗಳಲ್ಲಿ ಕೆಲವು ಸ್ವಾರಸ್ಯಕರ ಉತ್ಸವಗಳನ್ನು ಇಲ್ಲಿ ಉಲ್ಲೇಖಿಸಲಾಗಿದೆ. ಕಾಮಸೂತ್ರ, ಶೃಂಗಾರ ಪ್ರಕಾಶ, ಸರಸ್ವತಿ ಕಂಠಾಭರಣ, ಸಾಹಿತ್ಯ ಮೀಮಾಂಸ, ಭಾವ ಪ್ರಕಾಶನ ಮತ್ತು ಚತುರ್ವರ್ಗ ಚಿಂತಾಮಣಿ ಮುಂತಾದ ಕೃತಿಗಳಲ್ಲಿ ಈ ಹಬ್ಬಗಳ ವಿವರಣೆ ಇದೆ. ಕೆಲ ವಸಂತೋತ್ಸವಗಳಲ್ಲಿ : ಮದನೋತ್ಸವ - ತಿಂಗಳ ಕಾಲ ಪ್ರೇಮ, ಕಲೆ ಮತ್ತು ಪ್ರಕೃತಿ ಉಪಾಸನೆಯು ಪ್ರಮುಖವಾದ ಉತ್ಸವ. ಅಷ್ಠಮಿ ಚಂದ್ರ - ಚಂದ್ರಕಾಂತಿಯಲ್ಲಿ ಸ್ನೇಹಕೂಟ ಏರ್ಪಡುವ ಹಬ್ಬ. ಬಕುಳಾಶೋಕವಿಹೃತಿ - ಬಕುಳ ಮತ್ತು ಅಶೋಕ ಪುಷ್ಪಗಳನ್ನು ಬಿಡಿಸಿ, ಮಾಲೆಗಳಾಗಿ ಹೆಣೆದು, ದೇವತೆಗಳು ಮತ್ತು ಇನಿಯರು ಸಿಂಗರಿಸಿ ಕೊಂಡು ಸಂಭ್ರಮಿಸುವ ಪರ್ವ. ಶಾಲ್ಮಲೀ ಮೂಲ ಖೇಲನಂ -- ವಶಾಲವಾದ ಶಾಲ್ಮಲೀ ವೃಕ್ಷದ ಕೆಳಗೆ ಆಟವಾಡುವ ಹಬ್ಬ, ಅಶೋಕಾಷ್ಠಮಿ - ಅಶೋಕ ವೃಕ್ಷಕ್ಕೆ ಪೂಜಿಸುವ ಪರ್ವ , ಆಂದೋಲನ ಚತುರ್ಥಿ - ಡೋಲೋತ್ಸವ, ಉಯ್ಯಾಲೆ ಹಬ್ಬ. ಭೂತ ಮಾತೃಕ - ವೇಷಭೂಷಣ ಉತ್ಸವ. ಸುವಸಂತಕ - ಇನಿಯರ ಮೇಲೆ ಪುಷ್ಪ ಮತ್ತು ಓಕುಳಿ ಎರಚಿ ಸಂತಸ ಪಡುವ ಹಬ್ಬ.

ಗ್ರಂಥಋಣ: ಶತಾವಧಾನಿ ಡಾ|| ರಾ.ಗಣೇಶ್

Wednesday, February 15, 2012

ಸಂಕ್ಷಿಪ್ತ ರಾಮಾಯಣಂ



ಪೂರ್ವಂ ರಾಮತಪೋವನಾಭಿಗಮನಂ ಹತ್ವಾ ಮೃಗಂ ಕಾಂಚನಂ
ವೈದೇಹಿ ಹರಣಂ ಜಟಾಯು ಮರಣಂ ಸುಗ್ರೀವ ಸಂಭಾಷಣಂ|
ವಾಲೀ ನಿರ್ದಲನಂ ಸಮುದ್ರ ತರಣಂ ಲಂಕಾಪುರೇ ದಾಹನಂ
ಪಶ್ಚಾದ್ರಾವಣ ಕುಂಭಕರ್ಣ ಮಥನಂ ಏತದ್ಧಿ ರಾಮಾಯಣಂ||

ಏಕಶ್ಲೋಕೀ ಮಹಾಭಾರತ

ಆದೌ ಪಾಂಡವ ಧಾರ್ತರಾಷ್ಟ್ರಜನನಂ ಲಾಕ್ಷಾಗೃಹೇ ದಾಹನಮ್
ದ್ಯೂತಂ ಶ್ರೀಹರಣಂ ವನೇವಿಹರಣಂ ಮತ್ಸ್ಯಾಲಯೇ ವರ್ತನಮ್ |
ಲೀಲಾ ಗೋಗ್ರಹಣಂ ರಣೇವಿತರಣಂ ಸಂಧಿಕ್ರಿಯಾಜೃಂಭಣಂ
ಪಶ್ಚಾದ್ಭೀಷ್ಮ ಸುಯೋಧನಾದಿ ನಿಧನಂ ಏತನ್ಮಹಾಭಾರತಮ್ ||

ಏಕಶ್ಲೋಕೀ ಭಾಗವತ

ಆದೌ ದೇವಕಿದೇವಿ ಗರ್ಭ ಜನನಂ ಗೋಪಿ ಗೃಹೇ ವರ್ಧನಂ
ಮಾಯಾಪೂತನೀ ಜೀವಿತಾಪಹಾರಣಂ ಗೋವರ್ಧನೋದ್ಧಾರಣಂ|
ಕಂಸಕ್ಷೇಧನ ಕೌರವಾದಿ ಹನನಂ ಕುಂತೀಸುತ ಪಾಲನಂ
ಏತದ್ಧಿ ಮಹಾಭಾಗವತ ಪುರಾಣ ಪುಣ್ಯ ಖಚಿತಂ ಶ್ರೀಕೃಷ್ಣ ಲೀಲಾಮೃತಂ||

Sunday, January 22, 2012

ಭರತವರ್ಷ


ಉತ್ತರಂ ಯತ್ಸಮುದ್ರಸ್ಯ ಹಿಮಾದ್ರೇಶ್ಚೈವ ದಕ್ಷಿಣಂ|
ವರ್ಷಂ ತದ್ಭಾರತಂ ನಾಮ ಭಾರತೀ ಯತ್ರ ಸಂತತಿಃ ||


ಸಮುದ್ರಕ್ಕೆ ಉತ್ತರದಲ್ಲೂ, ಹಿಮಾಲಯಕ್ಕೆ ದಕ್ಷಿಣದಲ್ಲೂ ಇರುವ ಪ್ರದೇಶವನ್ನು ಭಾರತವೆನ್ನುತ್ತಾರೆ. ಅಲ್ಲಿ ವಾಸಿಸುವವರೇ ಭಾರತೀಯರು.

ಛಪ್ಪನ್ನೈವತ್ತಾರು ದೇಶಗಳು : ಅಂಗ, ವಂಗ, ಕಳಿಂಗ, ಕರ್ಣಾಟ, ಕೇರಳ,ಕಾಮರೂಪ, ಗೌಡ, ವನವಾಸ (ಬನವಾಸಿ),ಕುಂತಲ,ಕೊಂಕಣ,ಮಗಧ,ಸೌರಾಷ್ಟ್ರ,ಮಾಳವ,ಲಾಟ,ಭೋಜ,ವಿರಾಟ,ಶಬರ,ಕಕುರ,ಕುರು,ಅವಂತಿ,ಪಾಂಡ್ಯ,ಮದ್ರ,ಸಿಂಹಲ,ಗುರ್ಜರ,ಪಾರಸಿಕ,ಮಿಥಿಲ,ಪಾಂಚಾಲ,ಕ್ರೂರಸೇನಿ,ಗಾಂಧಾರ,ಬಾಹ್ಲಿಕ,ಹೈಹಯ,ತೌಳವ,ಸಾಲ್ವ,ಪುಂಡ್ರಕ,ಪ್ರಾಗ್ಜೋತಿಷ್ಯ,ಮತ್ಸ್ಯ,ಚೇದಿ,ಬರ್ಬರ,ನೇಪಾಳ,ಗೌಳ,ಕಾಶ್ಮೀರ,ಕನ್ಯಾಕುಬ್ಜ,ವಿದರ್ಭ,ಖುರಸಾಣ,ಮಹಾರಾಷ್ಟ್ರ,ಕೋಸಲ,ಕೇಕಯ,ಅಹಿಚ್ಛತ್ರ,ತ್ರಿಲಿಂಗ,ಪ್ರಯಾಗ,ಕರಹಂಟಕ,ಕಾಂಭೋಜ,ಭೋಟ,ಚೋಳ,ಹೂಣ,ಕಾಶಿ.