Sunday, October 28, 2012

ವಿಜ್ಞಾನ ಮತ್ತು ಕಲೆ


ಭಾರತದ ಪರಮಾಣು ಪಿತಾಮಹ ರೆಂದು ಖ್ಯಾತರಾಗಿರುವ ಹೋಮಿ ಜೆಹಾಂಗೀರ್ ಭಾಭಾ ಅವರು ದೇಶ ಕಂಡ ಮಹಾನ್ ವಿಜ್ಞಾನಿಗಳಲ್ಲಿ ಒಬ್ಬರು. ವಿಜ್ಞಾನ-ತಂತ್ರಜ್ಞಾನವೇ ಅಲ್ಲದೆ, ಭಾಭಾ ಅವರು ಉತ್ತಮ ಆಡಳಿತಕಾರರಾಗಿ ಸಹ ಭಾರತಕ್ಕೆ ಕೊಡುಗೆ ನೀಡಿದರು.ಭಾಭಾ ಅಣು ಸಂಶೋಧನಾ ಕೇಂದ್ರ,ಟಾಟಾ ಮೂಲ ವಿಜ್ಞಾನ ಸಂಶೋಧನಾ ಕೇಂದ್ರ ಮುಂತಾದ ಉನ್ನತ ಮಟ್ಟದ ಸಂಸ್ಥೆಗಳನ್ನೂ ಹುಟ್ಟುಹಾಕಿದರು. ೧೯೬೬ ರಲ್ಲಿ ಭಾಭಾ ಅವರ ಅಕಾಲಿಕ ಮರಣ ಸಂಭವಿಸಿದಾಗ ಕಲಾ ಪೋಷಕರಾದ ವಾನ್ ಲೆಯ್ದೆನ್ ಅವರು -- "ಭಾರತದ ಕಲಾ ಪ್ರಪಂಚ ಅನಾಥ ವಾಯಿತು" ಎಂದು ಉದ್ಗರಿಸಿದರು. ಇದೇನು, ಮೇಲು ದರ್ಜೆಯ ವಿಜ್ಞಾನಿ ಇಲ್ಲವಾದರೆ ಕಲಾ ಸಾಮ್ರಾಜ್ಯ ಹೇಗೆ ಬಡವಾಯಿತು ಎಂದು ಪ್ರಶ್ನಿಸಬಹುದು. ಸ್ವಾರಸ್ಯದ ಸಂಗತಿಯೆಂದರೆ ಭಾಭಾ ಅವರ ಬುದ್ಧಿ - ಜ್ಞಾನಗಳು ವಿಜ್ನಾನಿಯದ್ದಾದರೆ, ಹೃದಯವು ಮಾತ್ರ ಅಪ್ಪಟ ಕಲಾವಿದನದ್ದು, ಸಹೃದಯನದ್ದು. ಸರ್. ಸಿ. ವಿ. ರಾಮನ್ ಅವರು ಭಾಭಾರನ್ನು ಲಿಯೋ ನಾರ್ಡೋ ಡಾ ವಿಂಚಿ ಗೆ ಹೋಲಿಸಿದರು. ಹೋಲಿಕೆ ಅತ್ಯಂತ ಸಮಜಸವಾಗಿದೆ. ಡಾ ವಿಂಚಿ ಯಂತೆ ಭಾಭಾ ಸಹ ಬಹುಮುಖ ಪ್ರತಿಭೆ. ಭಾಭಾ ಅವರು ಫಿಲ್ ಹಾರ್ಮಾನಿಕ್ ಆರ್ಕೆಸ್ತ್ರದಲ್ಲಿ ( ವಾದ್ಯ ಗೋಷ್ಠಿ ಯಲ್ಲಿ ) ವಯೋಲಾ ನುಡಿಸುತ್ತಿದ್ದರು. ಕೇಂಬ್ರಿಡ್ಜ್ ನ ನೌಕಾ ತಂಡದಲ್ಲಿ ( ರೆಗಟ್ಟ) ದಲ್ಲಿ ದೋಣಿ ನಡೆಸುವ ಅಂಬಿಕರಾಗಿದ್ದರು, ಇದಲ್ಲದೆ ಮೊಜಾರ್ಟ್ ನ ' ದಿ ಮ್ಯಾರೇಜ್ ಆಫ್ ಫಿಗಾರೊ' ರೂಪಕಕ್ಕೆ ರಂಗ ಸಜ್ಜಿಕೆ ಮತ್ತು ಕುಂಚ ಹಿಡಿದಿದ್ದರು . ವಿಜ್ಞಾನಿಯಾಗಿ ಪರಮಾಣುಗಳ ಒಳಹೊಕ್ಕು ಬೇಧಿಸಿದ ಭಾಭಾ, ಕಲಾವಿದನಾಗಿ ಆಂತರ್ಯದ
ಹೃದಯದಾಳವನ್ನು ಶೋಧಿಸಿದರು. ಕವಿಹೃದಯಿ ಭಾಭಾ ಒಮ್ಮೆ ಹೀಗೆಂದಿದ್ದರು
ನನ್ನ ಜೀವಿತದ ಅವಧಿಯನ್ನು ಕಾಲ ಪರಿಮಿತಿಯಿಂದ ಹೆಚ್ಚಿಸಿಕೊಳ್ಳಲಾದು, ಆದರೆ ತೀವ್ರತೆಯನ್ನು ವೃದ್ಧಿಸುವುದರಿಂದ ಅದನ್ನು (ಜೀವಿತವನ್ನು) ವೃದ್ದಿ ಸಿ ಕೊಳ್ಳುತ್ತೇನೆ. ಕಲೆ, ಸಂಗೀತ, ಕಾವ್ಯ - ಇವುಗಳ ವ್ಯವಸ್ಥಿತಿಗಳಿಂದ ನನ್ನ ಒಂದೇ ಧ್ಯೇಯವೆಂದರೆ - ಕಲಾವ್ಯವಸ್ಥಿತಿ ಯಿಂದ ಜೀವನ ತೀವ್ರತೆಯ ಅನುಸಂಧಾನ