Thursday, December 27, 2012

ಎನಿತು ಧನ್ಯನೋ ಪಾರ್ಥ!

ಒಮ್ಮೆ ಇಂದ್ರನು ಶ್ರೀ ಕೃಷ್ಣನನ್ನು ಕುರಿತು ಒಂದು ವರವನ್ನು ಪ್ರದಾನ ಮಾಡುವುದಾಗಿ ಹೇಳಿದನು.ಏನು ವರವನ್ನೀಯಲಿ ಎಂದು ವಜ್ರಾಯುಧಧರನು ಮುರಾರಿಯನ್ನು ಕೇಳಲಾಗಿ, ಇಂದ್ರನ ಪುತ್ರನಾದ ಅರ್ಜುನನ ಶಾಶ್ವತ ಸಖ್ಯವನ್ನು ಬೇಡಿದನಂತೆ ಮುರವೈರಿ. ಸಕಲ ಚರಾಚರರ ಒಡೆಯ, ಮುನಿಸಂಕುಲವೆಲ್ಲ ಮೂರು ಕಾಲ ಭಜಿಸುವ ಸ್ವಾಮೀ ತಾನು ಅರ್ಜುನನ ಸ್ನೇಹಕ್ಕೆ ಹಾತೊರೆಯುವುದಾದರೆ, ಎನಿತು ಧನ್ಯನೋ ಪಾರ್ಥ!