Tuesday, December 31, 2013
Friday, November 29, 2013
ಸನಾತನ ಧರ್ಮ
ಮಹಾಲಕ್ಷ್ಮೀ ಅಷ್ಟಕ, ಶ್ರೀ ಗುರು ಅಷ್ಟಕ, ಕಾಲಭೈರವಾಷ್ಟಕ ಇತ್ಯಾದಿ ಹಲವಾರು ಅಷ್ಟಕಗಳನ್ನು ಧಾರ್ಮಿಕ ಸಾಹಿತ್ಯದಲ್ಲಿ ಹೇರಳವಾಗಿವೆಯಷ್ಟೇ. ಅದೇ ರೀತಿ ಚಿರಂತನ, ಪ್ರಾಚೀನ ಹಾಗು ಅನಾದಿಯಾದ ಸನಾತನ ಧರ್ಮದ ಕುರಿತು ಒಂದು ಅಷ್ಟಕವನ್ನು ವೇದಾಂತ ಚಕ್ರವರ್ತಿ. ವಿದ್ವಾನ್ ಕೆ. ಜಿ .ಸುಬ್ರಾಯಶರ್ಮ ಅವರು ರಚಿಸಿರುವ "ಧರ್ಮ- ವೇದ - ಬ್ರಹ್ಮ" ಎಂಬ ಪುಸ್ತಿಕೆಯಲ್ಲಿ ನೋಡಿದೆ. ಬಹಳ ಸ್ವಾರಸ್ಯಕರವಾದ, ಉಪಯುಕ್ತವಾದ ಈ ಅಷ್ಟಕವನ್ನು ಓದುಗರಲ್ಲಿ ಹಂಚಿ ಕೊಳ್ಳುತ್ತಿದ್ದೇನೆ.
ಅನಾದಿನಿಧನಂ ಶಾಂತಂ ಸರ್ವಪ್ರಾಣಿ ಶುಭಂಕರಂ
ಋಷಿ ಸಂಪೂಜಿತಂ ದಿವ್ಯಂ ಭಜೇ ವೇದಂ ಸನಾತನಂ ॥೧॥
ಸರ್ವಜ್ಞಂ ಸರ್ವವರದಂ ಸರ್ವಶಾಂತಿಕರಂ ಪ್ರಭುಂ ।
ಸರ್ವಶಾಸ್ತ್ರಸದಾಧಾರಂ ಭಜೇ ವೇದಂ ಸನಾತನಂ ॥೨॥
ಪ್ರವೃತ್ತಿ ಧರ್ಮವಕ್ತಾರಂ ತಥಾ ಭ್ಯುದಯದಾಯಕಂ
ಸರ್ವಸಂತ್ಪ್ರದಂ ಕಾಂತಂ ಭಜೇ ವೇದಂ ಸನಾತನಂ ॥೩॥
ನಿವ್ರುತ್ತಿಮಾರ್ಗವಕ್ತಾರಂ ನಿತ್ಯಾನಂದಪ್ರದಾಯಕಂ ।
ಸರ್ವ ಸಂನ್ಯಾಸಿ ಸಂಪೂಜ್ಯಂ ಭಜೇ ವೇದಂ ಸನಾತನಂ ॥೪॥
ವಿಶ್ವಾಧಾರಾಂ ಧರ್ಮಧರಂ ಧರ್ಮಬ್ರಹ್ಮ ಪ್ರಭೊಧಕಂ
ಹಿರಣ್ಯಗರ್ಭ ಗರ್ಭಸ್ಥಂ ಭಜೇ ವೇದಂ ಸನಾತನಂ ॥೫ ॥
ನಿರ್ದೋಷಂ ಸಗುಣಂ ನಿತ್ಯಂ ಸರ್ವಪಾಪಹರಂ ಶುಭಂ
ಶ್ರುತ್ಯಾಮ್ನಾಯಾದಿನಾಮಾನಂ ಭಜೇ ವೇದಂ ಸನಾತನಂ ॥೬ ॥
ಪರಬ್ರಹ್ಮ ಸ್ವರೂಪಂ ತಂ ಸರ್ವವೇದಾಂತ ವಂದಿತಂ
ಅಪೌರುಷೇಯಂ ಸರ್ವಜ್ಞಂ ಭಜೇ ವೇದಂ ಸನಾತನಂ ॥೭॥
ನಿತ್ಯಶುದ್ಧಂ ನಿತ್ಯಬುದ್ಧಂ ನಿತ್ಯಸತ್ಯಸ್ವಾರೂಪಿಣಂ
ನಿತ್ಯಾನಂದ ಪ್ರದಾತಾರಂ ಭಜೇ ವೇದಂ ಸನಾತನಂ ॥೮॥
ಅನಾದಿನಿಧನಂ ಶಾಂತಂ ಸರ್ವಪ್ರಾಣಿ ಶುಭಂಕರಂ
ಋಷಿ ಸಂಪೂಜಿತಂ ದಿವ್ಯಂ ಭಜೇ ವೇದಂ ಸನಾತನಂ ॥೧॥
ಸರ್ವಜ್ಞಂ ಸರ್ವವರದಂ ಸರ್ವಶಾಂತಿಕರಂ ಪ್ರಭುಂ ।
ಸರ್ವಶಾಸ್ತ್ರಸದಾಧಾರಂ ಭಜೇ ವೇದಂ ಸನಾತನಂ ॥೨॥
ಪ್ರವೃತ್ತಿ ಧರ್ಮವಕ್ತಾರಂ ತಥಾ ಭ್ಯುದಯದಾಯಕಂ
ಸರ್ವಸಂತ್ಪ್ರದಂ ಕಾಂತಂ ಭಜೇ ವೇದಂ ಸನಾತನಂ ॥೩॥
ನಿವ್ರುತ್ತಿಮಾರ್ಗವಕ್ತಾರಂ ನಿತ್ಯಾನಂದಪ್ರದಾಯಕಂ ।
ಸರ್ವ ಸಂನ್ಯಾಸಿ ಸಂಪೂಜ್ಯಂ ಭಜೇ ವೇದಂ ಸನಾತನಂ ॥೪॥
ವಿಶ್ವಾಧಾರಾಂ ಧರ್ಮಧರಂ ಧರ್ಮಬ್ರಹ್ಮ ಪ್ರಭೊಧಕಂ
ಹಿರಣ್ಯಗರ್ಭ ಗರ್ಭಸ್ಥಂ ಭಜೇ ವೇದಂ ಸನಾತನಂ ॥೫ ॥
ನಿರ್ದೋಷಂ ಸಗುಣಂ ನಿತ್ಯಂ ಸರ್ವಪಾಪಹರಂ ಶುಭಂ
ಶ್ರುತ್ಯಾಮ್ನಾಯಾದಿನಾಮಾನಂ ಭಜೇ ವೇದಂ ಸನಾತನಂ ॥೬ ॥
ಪರಬ್ರಹ್ಮ ಸ್ವರೂಪಂ ತಂ ಸರ್ವವೇದಾಂತ ವಂದಿತಂ
ಅಪೌರುಷೇಯಂ ಸರ್ವಜ್ಞಂ ಭಜೇ ವೇದಂ ಸನಾತನಂ ॥೭॥
ನಿತ್ಯಶುದ್ಧಂ ನಿತ್ಯಬುದ್ಧಂ ನಿತ್ಯಸತ್ಯಸ್ವಾರೂಪಿಣಂ
ನಿತ್ಯಾನಂದ ಪ್ರದಾತಾರಂ ಭಜೇ ವೇದಂ ಸನಾತನಂ ॥೮॥
Tuesday, October 29, 2013
ಗೀತಾಂಜಲಿ
ರಾಜಕುಮಾರನ ಪೋಷಾಕು ಧರಿಸಿದ ಪುಟ್ಟ ಕಂದಮ್ಮನಿಗೆ ಕೊರಳ ಸುತ್ತಲೂ ರತ್ನಹಾರದ ಸರಪಳಿ. ಆಡಳದುವೆ ತೊಡರು.ಪ್ರತಿ ಹೆಜ್ಜೆಯನ್ನು ಅಂಕುಷದಲ್ಲಿಡುವ ಆಡಂಬರ . ರಾಜ ಪೋಷಾಕು ಎಲ್ಲಿ ಕೊಳೆಯಾಗುವುದೋ , ಎಲ್ಲಿ ಸುಕ್ಕುಗಟ್ಟುವುದೋ ಎಂಬ ಅಳುಕಿನಲ್ಲಿ ಕದಲಿಕೆಗೆ ಕೂಡ ಭೀತಿ .. ಹೇ ಮಾತೆ, ಭೂಮಿಯ ಪವಿತ್ರ ಧೂಳೀ ಕಣಗಳಿಂದ ದೂರವಿಡುವ ಭವ್ಯ ಬಂಧನದಿಂದ ಏನು ಒಳಿತು. ಜೀವಿತದ ಮಹಾಮೇಳಕ್ಕೆ ಪ್ರವೇಶವನ್ನೇ ಕಸಿದುಕೊಳ್ಳುವ ಸಿರಿವಂತಿಕೆ ಭಾಗ್ಯವಾದೀತೇ?
Sunday, September 29, 2013
ಧರ್ಯ ಮತ್ತು ನಿಯಮ
ವಾಲ್ಮೀಕಿ ರಾಮಾಯಣದ ಅರಣ್ಯ ಕಾಂಡ. ಅಯೋಧ್ಯೆಯಿಂದ ಅರಣ್ಯದೆಡೆಗೆ ಶ್ರೀ ರಾಮಚಂದ್ರ ತೆರಳುತ್ತಿರುವ ಸಂದರ್ಭ.
ಕೌಸಲ್ಯೆಯು ಶ್ರೀರಾಮನಿಗೆ ಮಂಗಳಾಶೀರ್ವಾದವನ್ನು ಮಾಡುತ್ತ -- "ಯಾವ ಧರ್ಮವನ್ನು ನೀನು ಧೈರ್ಯದಿಂದಲೂ, ನಿಯಮದಿಂದಲೂ ಕಾಪಾಡುತ್ತಿರುವೆಯೊ ಆ ಧರ್ಮವೇ ನಿನ್ನನ್ನು ಕಾಪಾಡಲಿ." ಎಂಬ ಮಾತೃ ವಾಕ್ಯ ಗೋಚರಿಸುತ್ತದೆ.
ಯಂ ಪಾಲಯಸಿ ಧರ್ಮಂ ತ್ವಂ ಧೃತ್ಯಾ ಚ ನಿಯಮೇನ ಚ।
ಸ ವೈ ರಾಘವಶಾರ್ದೂಲ ಧರ್ಮಸ್ತ್ವಾಮಭಿರಕ್ಷತು ॥
ಧರ್ಯ ನಿಯಮ ಇವುಗಳಿಗೆ ಬೆಲೆ ಬರುವುದು.
ಕೌಸಲ್ಯೆಯು ಶ್ರೀರಾಮನಿಗೆ ಮಂಗಳಾಶೀರ್ವಾದವನ್ನು ಮಾಡುತ್ತ -- "ಯಾವ ಧರ್ಮವನ್ನು ನೀನು ಧೈರ್ಯದಿಂದಲೂ, ನಿಯಮದಿಂದಲೂ ಕಾಪಾಡುತ್ತಿರುವೆಯೊ ಆ ಧರ್ಮವೇ ನಿನ್ನನ್ನು ಕಾಪಾಡಲಿ." ಎಂಬ ಮಾತೃ ವಾಕ್ಯ ಗೋಚರಿಸುತ್ತದೆ.
ಯಂ ಪಾಲಯಸಿ ಧರ್ಮಂ ತ್ವಂ ಧೃತ್ಯಾ ಚ ನಿಯಮೇನ ಚ।
ಸ ವೈ ರಾಘವಶಾರ್ದೂಲ ಧರ್ಮಸ್ತ್ವಾಮಭಿರಕ್ಷತು ॥
ಧರ್ಯ ನಿಯಮ ಇವುಗಳಿಗೆ ಬೆಲೆ ಬರುವುದು.
Saturday, August 31, 2013
Tuesday, July 30, 2013
Saturday, June 29, 2013
ನ್ಯಾಯ ಸ್ವಾರಸ್ಯ
ಸಂಸ್ಕೃತ ಭಾಷಾ ಸಾಗರದಲ್ಲಿ ಮಾತನ್ನು ಮಾಣಿಕ್ಯ ಮಾಡುಲು ಸಮರ್ಥವಾದ ಹಲವಾರು "ನ್ಯಾಯ" ಗಳು ಇವೆ. ಉದಾಹರಣೆಗೆ ಹಂಸಕ್ಷೀರ ನ್ಯಾಯ, ಕಾಕತಾಳೀಯ ನ್ಯಾಯ, ಮಂಡೂಕ ತೋಲನ ನ್ಯಾಯ ಇತ್ಯಾದಿ. ನಮ್ಮ ಆಡು ಭಾಷೆಯಲ್ಲಿ ಪ್ರಯೋಗಿಸುವ ಈ ನ್ಯಾಯಗಳಿಂದ ಭಾಷೆಗೆ ಒಂದು ರೀತಿ ಸ್ವಾರಸ್ಯ, ಮೆರುಗು ದೊರೆಯುವುದರಲ್ಲಿ ಸಂಶಯವೇ ಇಲ್ಲ. ಉಪಮೆಗಳ ಸಮ್ಯಗ್ಪ್ರಯೋಗದಿಂದ ಅರ್ಥ ಸ್ಪಷ್ಟತೆ ಕೂಡ ಉಂಟಾಗುತ್ತದೆ. ಕೆಲವು ನ್ಯಾಯಗಳು ಆಡುಭಾಷೆಯ ಹಾಸು ಹೊಕ್ಕಾಗಿವೆ.
ಈಗ ಒಂದೆರಡು ನ್ಯಾಯಗಳನ್ನು ಪರಿಶೀಲಿಸೋಣ:
ಪೀಲು ಪತ್ರ ಫಲ ನ್ಯಾಯ: ಪೀಲು ಎಂಬುದು ಭರತವರ್ಷದಲ್ಲಿ ಕಂಡು ಬರುವ ಒಂದು ಸಸ್ಯ ಜಾತಿಯ ಪ್ರಬೇಧ. ಪೀಲುವಿನಲ್ಲಿ ಎಲೆಗಳು ಬಹಳ ಕಹಿ. ಆದರೆ ಹಣ್ಣುಗಳು ಮಾತ್ರ ಅಷ್ಟೇ ಸಿಹಿ. ಹೀಗೆ ಒಂದೇ ತರುವಿನಲ್ಲಿ ಸಿಹಿ ಮತ್ತು ಕಹಿ ಅಡಕವಾಗಿರುವಾಗ ಪೀಲು ಪತ್ರ ಫಲ ನ್ಯಾಯ ವನ್ನು ಉಲ್ಲೇಖಿಸುತ್ತೆವೆ. ರಾವಣ ವಿಭೀಷಣರು ಒಂದೇ ತಾಯಿ ಮಕ್ಕಳಾಗಿಯೂ ವ್ಯತಿರಿಕ್ತ ಮನೋಭಾವದವರಾಗಿದ್ದ ಹಾಗೆ.
Thursday, May 30, 2013
Tuesday, April 30, 2013
ಶಾಸ್ತ್ರ ಮತ್ತು ಕಲೆ
ಇರುವ ಪದಾರ್ಥಗಳ ಸ್ವರೂಪವನ್ನು ತಿಳಿಯುವುದು ಶಾಸ್ತ್ರ, ಹೊಸದನ್ನು ಸೃಷ್ಟಿ ಮಾಡುವುದು ಕಲೆ.
- ರಾಳ್ಳಪಲ್ಲಿ ಅನಂತ ಕೃಷ್ಣ ಶರ್ಮ
- ರಾಳ್ಳಪಲ್ಲಿ ಅನಂತ ಕೃಷ್ಣ ಶರ್ಮ
Sunday, March 31, 2013
ದಕ್ಷಿಣಾಮೂರ್ತಿ ಸ್ತೋತ್ರ
ಜಗದ್ಗುರು ಶ್ರೀ ಆದಿ ಶಂಕರಾಚಾರ್ಯರ ಸ್ತೋತ್ರ
ಸಾಹಿತ್ಯದಲ್ಲಿ ಭಕ್ತಿ ಪ್ರಧಾನ ಹಾಗು ವಿಚಾರಪ್ರಧಾನ ಎಂಬ ವಿಂಗಡನೆ ಸಾಧ್ಯ. ವಿಚಾರ
ಸಾಹಿತ್ಯದಲ್ಲಿ ಶ್ರೀ ದಕ್ಷಿಣಾಮೂರ್ತಿ ಸ್ತೋತ್ರ ಮುಖ್ಯ ಹಾಗು ಅತಿಶ್ರೇಷ್ಟ ಎಂದು
ಪರಿಗಣಿಸಬಹುದು ಇದರಲ್ಲಿ ಕೇವಲ ಹತ್ತು ಶ್ಲೋಕಗಳು ಇದ್ದರೂ ಗಹನ ಅರ್ಥಗರ್ಭಿತವಾಗಿದ್ದು,
ವಿದ್ವಾಂಸರು ಹಲವು ತಿಂಗಳುಗಳ ಕಾಲ ಈ ಸ್ತೋತ್ರದ ಪ್ರವಚನಗಳನ್ನು
ನೀಡಿದ್ದಾರೆ.ಪ್ರಮುಖವಾದ ಹತ್ತು ಉಪನಿಷತ್ತುಗಳ ಸಾರವೇ ಇದರಲ್ಲಿ ಅಡಕವಾಗಿದ್ದು, ಇದು
ವೇದಾಂತ ವಿಷಯದ ಆಗರವಾಗಿದೆ. ಮಾಂಡೂಕ್ಯೋಪನಿಷತ್ತಿನ ಅವಸ್ಥಾತ್ರಯ ಪಕ್ರಿಯೆ,
ಬೃಹದಾರಣ್ಯಕದ ಸರ್ವಾತ್ಮ ಭಾವ, ಛಾಂದೋಗ್ಯದ ಕಾರ್ಯಕಾರಣ ಪಕ್ರಿಯೆ, ತತ್ವಮಸಿ ವಾಕ್ಯಾರ್ಥ
ವಿಚಾರ ಸಾಮಾನ್ಯ ವಿಶೇಷ ಪ್ರಕ್ರಿಯೆ -- ಈ ವಿಚಾರಗಳು ವರ್ಣಿತವಾಗಿವೆ.
ವಿ. ಸೂ : ಮಾರ್ಚ್ ೧೭ ರಿಂದ ಮಾರ್ಚ್ ೨೧ ರ ವರೆಗೆ ಸಚ್ಚಿದಾನಂದ ಅದ್ವೈತಾಶ್ರಮದ ಶ್ರೀ ಶ್ರೀ ಅದ್ವಯಾನಂದೇದ್ರ ಸರಸ್ವತೀ ಸ್ವಾಮಿಗಳು ಶ್ರೀ ದಕ್ಷಿಣಾಮೂರ್ತಿ ಸ್ತೋತ್ರ ಯಜ್ಞ ಪಂಚಾಹ ಕಾರ್ಯಕ್ರಮವನ್ನು ರಸಧ್ವನಿ ಕಲಾ ಕೇಂದ್ರದಲ್ಲಿ ನಡೆಯಿತು
ವಿ. ಸೂ : ಮಾರ್ಚ್ ೧೭ ರಿಂದ ಮಾರ್ಚ್ ೨೧ ರ ವರೆಗೆ ಸಚ್ಚಿದಾನಂದ ಅದ್ವೈತಾಶ್ರಮದ ಶ್ರೀ ಶ್ರೀ ಅದ್ವಯಾನಂದೇದ್ರ ಸರಸ್ವತೀ ಸ್ವಾಮಿಗಳು ಶ್ರೀ ದಕ್ಷಿಣಾಮೂರ್ತಿ ಸ್ತೋತ್ರ ಯಜ್ಞ ಪಂಚಾಹ ಕಾರ್ಯಕ್ರಮವನ್ನು ರಸಧ್ವನಿ ಕಲಾ ಕೇಂದ್ರದಲ್ಲಿ ನಡೆಯಿತು
Tuesday, February 26, 2013
ಜಯೋಸ್ತುತೇ ಜಯೋಸ್ತುತೇ
ಅಪ್ರತಿಮ ದೇಶಭಕ್ತ ಸ್ವಾತಂತ್ರ್ಯ ವೀರ ಸಾವರ್ಕರ್ ದೇಹ ತ್ಯಾಗ ಮಾಡಿದ ದಿನ : ೨೬ - ಫೆಬ್ರವರಿ - ೧೯೬೬
ಆ ಸಿಂಧು ಸಿಂಧು ಪರ್ಯಂತ ಯಸ್ಯ ಭಾರತ ಭೂಮಿಕಾ|
ಪಿತೃಭೂ ಪುಣ್ಯ ಭೂಶ್ಚೈವ ಸವೈ ಹಿಂದು ರಿತಿಸ್ಮೃತಃ ||
"ಯಾರು ಭಾರತವನ್ನು ತನ್ನ ಪಿತೃಭೂಮಿ, ಮಾತೃಸ್ವರೂಪ, ಪುಣ್ಯಭೂಮಿ ಅಂತ ಭಾವಿಸುತ್ತಾನೋ, ಅವನು ಎಲ್ಲೇ ಇರಲಿ ಆತ ಹಿಂದೂ, ಭಾರತೀಯ"
Wednesday, January 30, 2013
Subscribe to:
Posts (Atom)