Sunday, March 31, 2013

ದಕ್ಷಿಣಾಮೂರ್ತಿ ಸ್ತೋತ್ರ

 ಜಗದ್ಗುರು ಶ್ರೀ ಆದಿ ಶಂಕರಾಚಾರ್ಯರ ಸ್ತೋತ್ರ ಸಾಹಿತ್ಯದಲ್ಲಿ ಭಕ್ತಿ ಪ್ರಧಾನ ಹಾಗು ವಿಚಾರಪ್ರಧಾನ ಎಂಬ ವಿಂಗಡನೆ ಸಾಧ್ಯ. ವಿಚಾರ ಸಾಹಿತ್ಯದಲ್ಲಿ ಶ್ರೀ ದಕ್ಷಿಣಾಮೂರ್ತಿ ಸ್ತೋತ್ರ ಮುಖ್ಯ ಹಾಗು ಅತಿಶ್ರೇಷ್ಟ ಎಂದು ಪರಿಗಣಿಸಬಹುದು ಇದರಲ್ಲಿ ಕೇವಲ ಹತ್ತು ಶ್ಲೋಕಗಳು ಇದ್ದರೂ ಗಹನ ಅರ್ಥಗರ್ಭಿತವಾಗಿದ್ದು, ವಿದ್ವಾಂಸರು ಹಲವು ತಿಂಗಳುಗಳ ಕಾಲ ಈ ಸ್ತೋತ್ರದ ಪ್ರವಚನಗಳನ್ನು ನೀಡಿದ್ದಾರೆ.ಪ್ರಮುಖವಾದ ಹತ್ತು ಉಪನಿಷತ್ತುಗಳ ಸಾರವೇ ಇದರಲ್ಲಿ ಅಡಕವಾಗಿದ್ದು, ಇದು ವೇದಾಂತ ವಿಷಯದ ಆಗರವಾಗಿದೆ. ಮಾಂಡೂಕ್ಯೋಪನಿಷತ್ತಿನ ಅವಸ್ಥಾತ್ರಯ ಪಕ್ರಿಯೆ, ಬೃಹದಾರಣ್ಯಕದ ಸರ್ವಾತ್ಮ ಭಾವ, ಛಾಂದೋಗ್ಯದ ಕಾರ್ಯಕಾರಣ ಪಕ್ರಿಯೆ, ತತ್ವಮಸಿ ವಾಕ್ಯಾರ್ಥ ವಿಚಾರ  ಸಾಮಾನ್ಯ ವಿಶೇಷ ಪ್ರಕ್ರಿಯೆ -- ಈ ವಿಚಾರಗಳು ವರ್ಣಿತವಾಗಿವೆ.

ವಿ. ಸೂ : ಮಾರ್ಚ್ ೧೭ ರಿಂದ ಮಾರ್ಚ್ ೨೧ ರ ವರೆಗೆ  ಸಚ್ಚಿದಾನಂದ ಅದ್ವೈತಾಶ್ರಮದ  ಶ್ರೀ ಶ್ರೀ ಅದ್ವಯಾನಂದೇದ್ರ ಸರಸ್ವತೀ ಸ್ವಾಮಿಗಳು  ಶ್ರೀ ದಕ್ಷಿಣಾಮೂರ್ತಿ ಸ್ತೋತ್ರ ಯಜ್ಞ ಪಂಚಾಹ ಕಾರ್ಯಕ್ರಮವನ್ನು ರಸಧ್ವನಿ ಕಲಾ ಕೇಂದ್ರದಲ್ಲಿ ನಡೆಯಿತು