Tuesday, October 29, 2013

ಗೀತಾಂಜಲಿ

ರಾಜಕುಮಾರನ ಪೋಷಾಕು ಧರಿಸಿದ ಪುಟ್ಟ ಕಂದಮ್ಮನಿಗೆ ಕೊರಳ ಸುತ್ತಲೂ ರತ್ನಹಾರದ ಸರಪಳಿ. ಆಡಳದುವೆ ತೊಡರು.ಪ್ರತಿ ಹೆಜ್ಜೆಯನ್ನು ಅಂಕುಷದಲ್ಲಿಡುವ ಆಡಂಬರ .   ರಾಜ ಪೋಷಾಕು ಎಲ್ಲಿ ಕೊಳೆಯಾಗುವುದೋ , ಎಲ್ಲಿ ಸುಕ್ಕುಗಟ್ಟುವುದೋ ಎಂಬ ಅಳುಕಿನಲ್ಲಿ ಕದಲಿಕೆಗೆ ಕೂಡ ಭೀತಿ .. ಹೇ ಮಾತೆ, ಭೂಮಿಯ ಪವಿತ್ರ ಧೂಳೀ ಕಣಗಳಿಂದ ದೂರವಿಡುವ ಭವ್ಯ ಬಂಧನದಿಂದ ಏನು ಒಳಿತು. ಜೀವಿತದ ಮಹಾಮೇಳಕ್ಕೆ ಪ್ರವೇಶವನ್ನೇ ಕಸಿದುಕೊಳ್ಳುವ ಸಿರಿವಂತಿಕೆ ಭಾಗ್ಯವಾದೀತೇ? 

No comments: