Monday, September 29, 2014

ಅಮೃತವಚನ




ಪಂಡಿತ್ ಜಿ ಹೇಳಿದ ಅಮೃತವಚನ

ಜಗತ್ತು ಸಂಘರ್ಷಾತ್ಮಕವಲ್ಲ, ಸ್ರುಜನಾತ್ಮಕ. ಬೀಜವು ವೃಕ್ಷ ರೂಪದಲ್ಲಿ ಹೊರಬರುವುದು ಸಂಘರ್ಷದ ಉದ್ದೇಶದಿಂದಲ್ಲ, ತನ್ನ ಸ್ವಂತದ ವಿಕಾಸಕ್ಕಾಗಿ, ಸಾಕ್ಷಾತ್ಕಾರಕ್ಕಾಗಿ. ಅದರ ಜೀವನೋದ್ದೇಶವು ಇನ್ನಾವುದರ ವಿನಾಶವೂ ಅಲ್ಲ. ಆದರೆ, ಇನ್ನೊಂದಕ್ಕಾಗಿ ತನ್ನನ್ನು ಸಮರ್ಪಿಸಿಕೊಳ್ಳುವುದೇ ಆಗಿದೆ. ಸಂಪೂರ್ಣ ಸೃಷ್ಟಿಯ ಪರಸ್ಪರ ಸಹಕಾರದಿಂದಲೇ ಮುಂದುವರಿಯುತ್ತದೆ. ಆದರ ಆಧಾರವು ಸಂಘರ್ಷವಲ್ಲ. ಸಹಯೋಗ. ಪಂಚ ಮಹಾಭೂತಗಳು ಜೊತೆಗೂಡುವುದು ಇನ್ನಾವುದರೊಂದಿಗೆ ಸಂಘರ್ಷ ಮಾಡಲೆಂದಲ್ಲ. ಆದರೆ ತಮ್ಮ ಪ್ರಕೃತಿಗೆ ತಕ್ಕಂತೆ ನಡೆದುಕೊಂಡು ಆ ಮೂಲಕ ಸೃಷ್ಟಿಯ ಸಾರ್ಥಕತೆಯ ಇಚ್ಚೇಯನ್ನು ಪೂರ್ಣ ಮಾಡಲೆಂದು!