Saturday, February 12, 2011

ಶ್ರೀಕರ ಆಮೋದಿನಿ




ನಂಜನಗೂಡಿನ ಸದ್ವೈದ್ಯಶಾಲಾ ಕರುನಾಡಿನಲ್ಲಿ ಮನೆಮಾತು. ಆಯುರ್ವೇದ-ಪ್ರಕೃತಿಚಿಕಿತ್ಸೆಗಳನ್ನು ಮನೆಮನೆಗೆ ತಲಪಿಸುವಲ್ಲಿ ಶ್ರೀಯುತರಾದ ಬಿ.ವಿ.ಪಂಡಿತರ ಸೇವೆ ಮಹತ್ತರವಾದುದು. ಸದ್ವೈದ್ಯಶಾಲೆಯಿಂದ ಗಾಯಕ-ವಾಚಕ ವರ್ಗಕ್ಕೆ ವರದಾನದಂತಿರುವುದು ಶ್ರೀ ಕರ ಆಮೋದಿನಿ . ಆಮೋದಿನಿಯ ಗುಳಿಗೆ ಸೇವಿಸುವುದರಿಂದ ಧ್ವನಿ ತೆರೆದು ಕೊಳ್ಳುತ್ತದೆ. ಕಚೇರಿಯ ಅಥವಾ ಪ್ರವಚನದ ಮುಂಚೆ ಒಂದು ಗುಳಿಗೆ ಬಾಯಿನಲ್ಲಿ ಹಾಕಿಕೊಂದರೆ ಸುಮಾರು ಹೊತ್ತು ಹಾಡಿ-ಮಾತನಾಡಿದರು ಗಂಟಲಿನಲ್ಲಿ ಆಯಾಸ ಅಥವಾ ನೋವು ತಿಳಿಯುವುದಿಲ್ಲ. ಅದಲ್ಲದೆ ಸ್ವರವು ಸರಿಯಾಗಿ ಹೊರಹೊಮ್ಮುವಂತೆ ಸಹಕಾರವನ್ನೀಯುತ್ತದೆ. ಆದ್ದರಿಂದಲೆ ಬಹಳಷ್ಟು ಗಾಯಕರ ಕೈಚೀಲಗಳಲ್ಲಿ ಆಮೋದಿನಿ ಶೋಭಿಸುತ್ತಿರುತ್ತದೆ. ಮಧುಕ, ಕುಂಕುಮಕೇಸರ ಗಳನ್ನೊಳಗೊಂಡ ಶ್ರೀಕರ ಆಮೋದಿನಿ ಸ್ವರಬೇಧ, ಸ್ವರಭಂಗ, ನಾಸಗಥ ರೋಗ, ಗಲರೋಗಗಳಿಗೆ ರಾಮಬಾಣ.
ಶ್ರೀಕರ ಆಮೋದಿನಿ - ಗಾಯಕ ವಾಚಕರ ಪಾಲಿನ ಸಂಜೀವಿನಿ.

No comments: