Thursday, February 27, 2014
Thursday, January 30, 2014
ಶ್ರೀ ಕೃಷ್ಣ ಸ್ತುತಿ
ಏಕೋಪಿ ಕೃಷ್ಣಸ್ಯ ಕೃತಃ ಪ್ರಣಾಮಃ ದಶಾಶ್ವಮೇಧಾವ ಭ್ರುತೇನ ತುಲ್ಯಃ ।
ದಶಾಶ್ವಮೇಧೀ ಪುನರೇತಿ ಜನ್ಮ ಕೃಷ್ಣ ಪ್ರಣಾಮಿ ನ ಪುನರ್ಭವಾಯ ।।
ಶ್ರೀ ಕೃಷ್ಣನಿಗೆ ಮಾಡಿದಂತಹ ಒಂದು ಪ್ರನಾಮವು ಹತ್ತು ಅಶ್ವಮೇಧ ಯಾಗಗಳ ಅವಭೃತ ಸ್ನಾನಕ್ಕೆ ಸಮಾನವಾಗಿದೆ. ಆದರೆ ಈ ಅಶ್ವಮೇಧ ಯಾಗದ ಪುಣ್ಯ ಭೊಗಿಸಿದ ನಂತರ ಮತ್ತೆ ಸಂಸಾರ ಬಂಧನಕ್ಕೆ ಬರುತ್ತಾರೆ. ಶ್ರೀ ಕೃಷ್ಣನಿಗೆ ನಮಸ್ಕಾರ ಮಾಡಿದವರು ಮತ್ತೆ ಸಂಸಾರ ಬಂಧನಕ್ಕೆ ಒಳಗಾಗುವುದಿಲ್ಲ.
Tuesday, December 31, 2013
Friday, November 29, 2013
ಸನಾತನ ಧರ್ಮ
ಮಹಾಲಕ್ಷ್ಮೀ ಅಷ್ಟಕ, ಶ್ರೀ ಗುರು ಅಷ್ಟಕ, ಕಾಲಭೈರವಾಷ್ಟಕ ಇತ್ಯಾದಿ ಹಲವಾರು ಅಷ್ಟಕಗಳನ್ನು ಧಾರ್ಮಿಕ ಸಾಹಿತ್ಯದಲ್ಲಿ ಹೇರಳವಾಗಿವೆಯಷ್ಟೇ. ಅದೇ ರೀತಿ ಚಿರಂತನ, ಪ್ರಾಚೀನ ಹಾಗು ಅನಾದಿಯಾದ ಸನಾತನ ಧರ್ಮದ ಕುರಿತು ಒಂದು ಅಷ್ಟಕವನ್ನು ವೇದಾಂತ ಚಕ್ರವರ್ತಿ. ವಿದ್ವಾನ್ ಕೆ. ಜಿ .ಸುಬ್ರಾಯಶರ್ಮ ಅವರು ರಚಿಸಿರುವ "ಧರ್ಮ- ವೇದ - ಬ್ರಹ್ಮ" ಎಂಬ ಪುಸ್ತಿಕೆಯಲ್ಲಿ ನೋಡಿದೆ. ಬಹಳ ಸ್ವಾರಸ್ಯಕರವಾದ, ಉಪಯುಕ್ತವಾದ ಈ ಅಷ್ಟಕವನ್ನು ಓದುಗರಲ್ಲಿ ಹಂಚಿ ಕೊಳ್ಳುತ್ತಿದ್ದೇನೆ.
ಅನಾದಿನಿಧನಂ ಶಾಂತಂ ಸರ್ವಪ್ರಾಣಿ ಶುಭಂಕರಂ
ಋಷಿ ಸಂಪೂಜಿತಂ ದಿವ್ಯಂ ಭಜೇ ವೇದಂ ಸನಾತನಂ ॥೧॥
ಸರ್ವಜ್ಞಂ ಸರ್ವವರದಂ ಸರ್ವಶಾಂತಿಕರಂ ಪ್ರಭುಂ ।
ಸರ್ವಶಾಸ್ತ್ರಸದಾಧಾರಂ ಭಜೇ ವೇದಂ ಸನಾತನಂ ॥೨॥
ಪ್ರವೃತ್ತಿ ಧರ್ಮವಕ್ತಾರಂ ತಥಾ ಭ್ಯುದಯದಾಯಕಂ
ಸರ್ವಸಂತ್ಪ್ರದಂ ಕಾಂತಂ ಭಜೇ ವೇದಂ ಸನಾತನಂ ॥೩॥
ನಿವ್ರುತ್ತಿಮಾರ್ಗವಕ್ತಾರಂ ನಿತ್ಯಾನಂದಪ್ರದಾಯಕಂ ।
ಸರ್ವ ಸಂನ್ಯಾಸಿ ಸಂಪೂಜ್ಯಂ ಭಜೇ ವೇದಂ ಸನಾತನಂ ॥೪॥
ವಿಶ್ವಾಧಾರಾಂ ಧರ್ಮಧರಂ ಧರ್ಮಬ್ರಹ್ಮ ಪ್ರಭೊಧಕಂ
ಹಿರಣ್ಯಗರ್ಭ ಗರ್ಭಸ್ಥಂ ಭಜೇ ವೇದಂ ಸನಾತನಂ ॥೫ ॥
ನಿರ್ದೋಷಂ ಸಗುಣಂ ನಿತ್ಯಂ ಸರ್ವಪಾಪಹರಂ ಶುಭಂ
ಶ್ರುತ್ಯಾಮ್ನಾಯಾದಿನಾಮಾನಂ ಭಜೇ ವೇದಂ ಸನಾತನಂ ॥೬ ॥
ಪರಬ್ರಹ್ಮ ಸ್ವರೂಪಂ ತಂ ಸರ್ವವೇದಾಂತ ವಂದಿತಂ
ಅಪೌರುಷೇಯಂ ಸರ್ವಜ್ಞಂ ಭಜೇ ವೇದಂ ಸನಾತನಂ ॥೭॥
ನಿತ್ಯಶುದ್ಧಂ ನಿತ್ಯಬುದ್ಧಂ ನಿತ್ಯಸತ್ಯಸ್ವಾರೂಪಿಣಂ
ನಿತ್ಯಾನಂದ ಪ್ರದಾತಾರಂ ಭಜೇ ವೇದಂ ಸನಾತನಂ ॥೮॥
ಅನಾದಿನಿಧನಂ ಶಾಂತಂ ಸರ್ವಪ್ರಾಣಿ ಶುಭಂಕರಂ
ಋಷಿ ಸಂಪೂಜಿತಂ ದಿವ್ಯಂ ಭಜೇ ವೇದಂ ಸನಾತನಂ ॥೧॥
ಸರ್ವಜ್ಞಂ ಸರ್ವವರದಂ ಸರ್ವಶಾಂತಿಕರಂ ಪ್ರಭುಂ ।
ಸರ್ವಶಾಸ್ತ್ರಸದಾಧಾರಂ ಭಜೇ ವೇದಂ ಸನಾತನಂ ॥೨॥
ಪ್ರವೃತ್ತಿ ಧರ್ಮವಕ್ತಾರಂ ತಥಾ ಭ್ಯುದಯದಾಯಕಂ
ಸರ್ವಸಂತ್ಪ್ರದಂ ಕಾಂತಂ ಭಜೇ ವೇದಂ ಸನಾತನಂ ॥೩॥
ನಿವ್ರುತ್ತಿಮಾರ್ಗವಕ್ತಾರಂ ನಿತ್ಯಾನಂದಪ್ರದಾಯಕಂ ।
ಸರ್ವ ಸಂನ್ಯಾಸಿ ಸಂಪೂಜ್ಯಂ ಭಜೇ ವೇದಂ ಸನಾತನಂ ॥೪॥
ವಿಶ್ವಾಧಾರಾಂ ಧರ್ಮಧರಂ ಧರ್ಮಬ್ರಹ್ಮ ಪ್ರಭೊಧಕಂ
ಹಿರಣ್ಯಗರ್ಭ ಗರ್ಭಸ್ಥಂ ಭಜೇ ವೇದಂ ಸನಾತನಂ ॥೫ ॥
ನಿರ್ದೋಷಂ ಸಗುಣಂ ನಿತ್ಯಂ ಸರ್ವಪಾಪಹರಂ ಶುಭಂ
ಶ್ರುತ್ಯಾಮ್ನಾಯಾದಿನಾಮಾನಂ ಭಜೇ ವೇದಂ ಸನಾತನಂ ॥೬ ॥
ಪರಬ್ರಹ್ಮ ಸ್ವರೂಪಂ ತಂ ಸರ್ವವೇದಾಂತ ವಂದಿತಂ
ಅಪೌರುಷೇಯಂ ಸರ್ವಜ್ಞಂ ಭಜೇ ವೇದಂ ಸನಾತನಂ ॥೭॥
ನಿತ್ಯಶುದ್ಧಂ ನಿತ್ಯಬುದ್ಧಂ ನಿತ್ಯಸತ್ಯಸ್ವಾರೂಪಿಣಂ
ನಿತ್ಯಾನಂದ ಪ್ರದಾತಾರಂ ಭಜೇ ವೇದಂ ಸನಾತನಂ ॥೮॥
Tuesday, October 29, 2013
ಗೀತಾಂಜಲಿ
ರಾಜಕುಮಾರನ ಪೋಷಾಕು ಧರಿಸಿದ ಪುಟ್ಟ ಕಂದಮ್ಮನಿಗೆ ಕೊರಳ ಸುತ್ತಲೂ ರತ್ನಹಾರದ ಸರಪಳಿ. ಆಡಳದುವೆ ತೊಡರು.ಪ್ರತಿ ಹೆಜ್ಜೆಯನ್ನು ಅಂಕುಷದಲ್ಲಿಡುವ ಆಡಂಬರ . ರಾಜ ಪೋಷಾಕು ಎಲ್ಲಿ ಕೊಳೆಯಾಗುವುದೋ , ಎಲ್ಲಿ ಸುಕ್ಕುಗಟ್ಟುವುದೋ ಎಂಬ ಅಳುಕಿನಲ್ಲಿ ಕದಲಿಕೆಗೆ ಕೂಡ ಭೀತಿ .. ಹೇ ಮಾತೆ, ಭೂಮಿಯ ಪವಿತ್ರ ಧೂಳೀ ಕಣಗಳಿಂದ ದೂರವಿಡುವ ಭವ್ಯ ಬಂಧನದಿಂದ ಏನು ಒಳಿತು. ಜೀವಿತದ ಮಹಾಮೇಳಕ್ಕೆ ಪ್ರವೇಶವನ್ನೇ ಕಸಿದುಕೊಳ್ಳುವ ಸಿರಿವಂತಿಕೆ ಭಾಗ್ಯವಾದೀತೇ?
Sunday, September 29, 2013
ಧರ್ಯ ಮತ್ತು ನಿಯಮ
ವಾಲ್ಮೀಕಿ ರಾಮಾಯಣದ ಅರಣ್ಯ ಕಾಂಡ. ಅಯೋಧ್ಯೆಯಿಂದ ಅರಣ್ಯದೆಡೆಗೆ ಶ್ರೀ ರಾಮಚಂದ್ರ ತೆರಳುತ್ತಿರುವ ಸಂದರ್ಭ.
ಕೌಸಲ್ಯೆಯು ಶ್ರೀರಾಮನಿಗೆ ಮಂಗಳಾಶೀರ್ವಾದವನ್ನು ಮಾಡುತ್ತ -- "ಯಾವ ಧರ್ಮವನ್ನು ನೀನು ಧೈರ್ಯದಿಂದಲೂ, ನಿಯಮದಿಂದಲೂ ಕಾಪಾಡುತ್ತಿರುವೆಯೊ ಆ ಧರ್ಮವೇ ನಿನ್ನನ್ನು ಕಾಪಾಡಲಿ." ಎಂಬ ಮಾತೃ ವಾಕ್ಯ ಗೋಚರಿಸುತ್ತದೆ.
ಯಂ ಪಾಲಯಸಿ ಧರ್ಮಂ ತ್ವಂ ಧೃತ್ಯಾ ಚ ನಿಯಮೇನ ಚ।
ಸ ವೈ ರಾಘವಶಾರ್ದೂಲ ಧರ್ಮಸ್ತ್ವಾಮಭಿರಕ್ಷತು ॥
ಧರ್ಯ ನಿಯಮ ಇವುಗಳಿಗೆ ಬೆಲೆ ಬರುವುದು.
ಕೌಸಲ್ಯೆಯು ಶ್ರೀರಾಮನಿಗೆ ಮಂಗಳಾಶೀರ್ವಾದವನ್ನು ಮಾಡುತ್ತ -- "ಯಾವ ಧರ್ಮವನ್ನು ನೀನು ಧೈರ್ಯದಿಂದಲೂ, ನಿಯಮದಿಂದಲೂ ಕಾಪಾಡುತ್ತಿರುವೆಯೊ ಆ ಧರ್ಮವೇ ನಿನ್ನನ್ನು ಕಾಪಾಡಲಿ." ಎಂಬ ಮಾತೃ ವಾಕ್ಯ ಗೋಚರಿಸುತ್ತದೆ.
ಯಂ ಪಾಲಯಸಿ ಧರ್ಮಂ ತ್ವಂ ಧೃತ್ಯಾ ಚ ನಿಯಮೇನ ಚ।
ಸ ವೈ ರಾಘವಶಾರ್ದೂಲ ಧರ್ಮಸ್ತ್ವಾಮಭಿರಕ್ಷತು ॥
ಧರ್ಯ ನಿಯಮ ಇವುಗಳಿಗೆ ಬೆಲೆ ಬರುವುದು.
Saturday, August 31, 2013
Tuesday, July 30, 2013
Saturday, June 29, 2013
ನ್ಯಾಯ ಸ್ವಾರಸ್ಯ
ಸಂಸ್ಕೃತ ಭಾಷಾ ಸಾಗರದಲ್ಲಿ ಮಾತನ್ನು ಮಾಣಿಕ್ಯ ಮಾಡುಲು ಸಮರ್ಥವಾದ ಹಲವಾರು "ನ್ಯಾಯ" ಗಳು ಇವೆ. ಉದಾಹರಣೆಗೆ ಹಂಸಕ್ಷೀರ ನ್ಯಾಯ, ಕಾಕತಾಳೀಯ ನ್ಯಾಯ, ಮಂಡೂಕ ತೋಲನ ನ್ಯಾಯ ಇತ್ಯಾದಿ. ನಮ್ಮ ಆಡು ಭಾಷೆಯಲ್ಲಿ ಪ್ರಯೋಗಿಸುವ ಈ ನ್ಯಾಯಗಳಿಂದ ಭಾಷೆಗೆ ಒಂದು ರೀತಿ ಸ್ವಾರಸ್ಯ, ಮೆರುಗು ದೊರೆಯುವುದರಲ್ಲಿ ಸಂಶಯವೇ ಇಲ್ಲ. ಉಪಮೆಗಳ ಸಮ್ಯಗ್ಪ್ರಯೋಗದಿಂದ ಅರ್ಥ ಸ್ಪಷ್ಟತೆ ಕೂಡ ಉಂಟಾಗುತ್ತದೆ. ಕೆಲವು ನ್ಯಾಯಗಳು ಆಡುಭಾಷೆಯ ಹಾಸು ಹೊಕ್ಕಾಗಿವೆ.
ಈಗ ಒಂದೆರಡು ನ್ಯಾಯಗಳನ್ನು ಪರಿಶೀಲಿಸೋಣ:
ಪೀಲು ಪತ್ರ ಫಲ ನ್ಯಾಯ: ಪೀಲು ಎಂಬುದು ಭರತವರ್ಷದಲ್ಲಿ ಕಂಡು ಬರುವ ಒಂದು ಸಸ್ಯ ಜಾತಿಯ ಪ್ರಬೇಧ. ಪೀಲುವಿನಲ್ಲಿ ಎಲೆಗಳು ಬಹಳ ಕಹಿ. ಆದರೆ ಹಣ್ಣುಗಳು ಮಾತ್ರ ಅಷ್ಟೇ ಸಿಹಿ. ಹೀಗೆ ಒಂದೇ ತರುವಿನಲ್ಲಿ ಸಿಹಿ ಮತ್ತು ಕಹಿ ಅಡಕವಾಗಿರುವಾಗ ಪೀಲು ಪತ್ರ ಫಲ ನ್ಯಾಯ ವನ್ನು ಉಲ್ಲೇಖಿಸುತ್ತೆವೆ. ರಾವಣ ವಿಭೀಷಣರು ಒಂದೇ ತಾಯಿ ಮಕ್ಕಳಾಗಿಯೂ ವ್ಯತಿರಿಕ್ತ ಮನೋಭಾವದವರಾಗಿದ್ದ ಹಾಗೆ.
Thursday, May 30, 2013
Tuesday, April 30, 2013
ಶಾಸ್ತ್ರ ಮತ್ತು ಕಲೆ
ಇರುವ ಪದಾರ್ಥಗಳ ಸ್ವರೂಪವನ್ನು ತಿಳಿಯುವುದು ಶಾಸ್ತ್ರ, ಹೊಸದನ್ನು ಸೃಷ್ಟಿ ಮಾಡುವುದು ಕಲೆ.
- ರಾಳ್ಳಪಲ್ಲಿ ಅನಂತ ಕೃಷ್ಣ ಶರ್ಮ
- ರಾಳ್ಳಪಲ್ಲಿ ಅನಂತ ಕೃಷ್ಣ ಶರ್ಮ
Sunday, March 31, 2013
ದಕ್ಷಿಣಾಮೂರ್ತಿ ಸ್ತೋತ್ರ
ಜಗದ್ಗುರು ಶ್ರೀ ಆದಿ ಶಂಕರಾಚಾರ್ಯರ ಸ್ತೋತ್ರ
ಸಾಹಿತ್ಯದಲ್ಲಿ ಭಕ್ತಿ ಪ್ರಧಾನ ಹಾಗು ವಿಚಾರಪ್ರಧಾನ ಎಂಬ ವಿಂಗಡನೆ ಸಾಧ್ಯ. ವಿಚಾರ
ಸಾಹಿತ್ಯದಲ್ಲಿ ಶ್ರೀ ದಕ್ಷಿಣಾಮೂರ್ತಿ ಸ್ತೋತ್ರ ಮುಖ್ಯ ಹಾಗು ಅತಿಶ್ರೇಷ್ಟ ಎಂದು
ಪರಿಗಣಿಸಬಹುದು ಇದರಲ್ಲಿ ಕೇವಲ ಹತ್ತು ಶ್ಲೋಕಗಳು ಇದ್ದರೂ ಗಹನ ಅರ್ಥಗರ್ಭಿತವಾಗಿದ್ದು,
ವಿದ್ವಾಂಸರು ಹಲವು ತಿಂಗಳುಗಳ ಕಾಲ ಈ ಸ್ತೋತ್ರದ ಪ್ರವಚನಗಳನ್ನು
ನೀಡಿದ್ದಾರೆ.ಪ್ರಮುಖವಾದ ಹತ್ತು ಉಪನಿಷತ್ತುಗಳ ಸಾರವೇ ಇದರಲ್ಲಿ ಅಡಕವಾಗಿದ್ದು, ಇದು
ವೇದಾಂತ ವಿಷಯದ ಆಗರವಾಗಿದೆ. ಮಾಂಡೂಕ್ಯೋಪನಿಷತ್ತಿನ ಅವಸ್ಥಾತ್ರಯ ಪಕ್ರಿಯೆ,
ಬೃಹದಾರಣ್ಯಕದ ಸರ್ವಾತ್ಮ ಭಾವ, ಛಾಂದೋಗ್ಯದ ಕಾರ್ಯಕಾರಣ ಪಕ್ರಿಯೆ, ತತ್ವಮಸಿ ವಾಕ್ಯಾರ್ಥ
ವಿಚಾರ ಸಾಮಾನ್ಯ ವಿಶೇಷ ಪ್ರಕ್ರಿಯೆ -- ಈ ವಿಚಾರಗಳು ವರ್ಣಿತವಾಗಿವೆ.
ವಿ. ಸೂ : ಮಾರ್ಚ್ ೧೭ ರಿಂದ ಮಾರ್ಚ್ ೨೧ ರ ವರೆಗೆ ಸಚ್ಚಿದಾನಂದ ಅದ್ವೈತಾಶ್ರಮದ ಶ್ರೀ ಶ್ರೀ ಅದ್ವಯಾನಂದೇದ್ರ ಸರಸ್ವತೀ ಸ್ವಾಮಿಗಳು ಶ್ರೀ ದಕ್ಷಿಣಾಮೂರ್ತಿ ಸ್ತೋತ್ರ ಯಜ್ಞ ಪಂಚಾಹ ಕಾರ್ಯಕ್ರಮವನ್ನು ರಸಧ್ವನಿ ಕಲಾ ಕೇಂದ್ರದಲ್ಲಿ ನಡೆಯಿತು
ವಿ. ಸೂ : ಮಾರ್ಚ್ ೧೭ ರಿಂದ ಮಾರ್ಚ್ ೨೧ ರ ವರೆಗೆ ಸಚ್ಚಿದಾನಂದ ಅದ್ವೈತಾಶ್ರಮದ ಶ್ರೀ ಶ್ರೀ ಅದ್ವಯಾನಂದೇದ್ರ ಸರಸ್ವತೀ ಸ್ವಾಮಿಗಳು ಶ್ರೀ ದಕ್ಷಿಣಾಮೂರ್ತಿ ಸ್ತೋತ್ರ ಯಜ್ಞ ಪಂಚಾಹ ಕಾರ್ಯಕ್ರಮವನ್ನು ರಸಧ್ವನಿ ಕಲಾ ಕೇಂದ್ರದಲ್ಲಿ ನಡೆಯಿತು
Tuesday, February 26, 2013
ಜಯೋಸ್ತುತೇ ಜಯೋಸ್ತುತೇ
ಅಪ್ರತಿಮ ದೇಶಭಕ್ತ ಸ್ವಾತಂತ್ರ್ಯ ವೀರ ಸಾವರ್ಕರ್ ದೇಹ ತ್ಯಾಗ ಮಾಡಿದ ದಿನ : ೨೬ - ಫೆಬ್ರವರಿ - ೧೯೬೬
ಆ ಸಿಂಧು ಸಿಂಧು ಪರ್ಯಂತ ಯಸ್ಯ ಭಾರತ ಭೂಮಿಕಾ|
ಪಿತೃಭೂ ಪುಣ್ಯ ಭೂಶ್ಚೈವ ಸವೈ ಹಿಂದು ರಿತಿಸ್ಮೃತಃ ||
"ಯಾರು ಭಾರತವನ್ನು ತನ್ನ ಪಿತೃಭೂಮಿ, ಮಾತೃಸ್ವರೂಪ, ಪುಣ್ಯಭೂಮಿ ಅಂತ ಭಾವಿಸುತ್ತಾನೋ, ಅವನು ಎಲ್ಲೇ ಇರಲಿ ಆತ ಹಿಂದೂ, ಭಾರತೀಯ"
Wednesday, January 30, 2013
Thursday, December 27, 2012
ಎನಿತು ಧನ್ಯನೋ ಪಾರ್ಥ!
ಒಮ್ಮೆ ಇಂದ್ರನು ಶ್ರೀ ಕೃಷ್ಣನನ್ನು ಕುರಿತು ಒಂದು ವರವನ್ನು ಪ್ರದಾನ ಮಾಡುವುದಾಗಿ ಹೇಳಿದನು.ಏನು ವರವನ್ನೀಯಲಿ ಎಂದು ವಜ್ರಾಯುಧಧರನು ಮುರಾರಿಯನ್ನು ಕೇಳಲಾಗಿ, ಇಂದ್ರನ ಪುತ್ರನಾದ ಅರ್ಜುನನ ಶಾಶ್ವತ ಸಖ್ಯವನ್ನು ಬೇಡಿದನಂತೆ ಮುರವೈರಿ. ಸಕಲ ಚರಾಚರರ ಒಡೆಯ, ಮುನಿಸಂಕುಲವೆಲ್ಲ ಮೂರು ಕಾಲ ಭಜಿಸುವ ಸ್ವಾಮೀ ತಾನು ಅರ್ಜುನನ ಸ್ನೇಹಕ್ಕೆ ಹಾತೊರೆಯುವುದಾದರೆ, ಎನಿತು ಧನ್ಯನೋ ಪಾರ್ಥ!
Wednesday, November 28, 2012
ಬಿಟ್ಟು ಹೊರಟಿಹ ಠಕ್ಕ
ಬಿಟ್ಟು ಹೊರಟಿಹ ಠಕ್ಕ
ಕಿಟಕಿಯಿಂದಲಿ ಕಾಂಬ
ನಭದೆ ಹೊಳೆಯುವ ಶಶಿಯ
ಝೆನ್ ಕವಿಗಳು ಚಂದ್ರನನ್ನು ಜಾಗೃತ ಚಿತ್ತಕ್ಕೆ ಪ್ರತಿಮೆಯಾಗಿ ಬಹಳಷ್ಟು ಬಾರಿ ಬಳಸುವುದುಂಟು. ಝೆನ್ ಗುರು ರಯೋಕನ್ ಒಮ್ಮೆ ತನ್ನ ಗುಡಿಸಲಿಗೆ ಬಂದಾಗ ಕಳ್ಳನೊಬ್ಬ ಗುಡಿಸಲಿನಲ್ಲಿ ಇದ್ದ ಎಲ್ಲ ವಸ್ತುಗಳನ್ನು ದೋಚಿ ಓಡಿಹೋಗುತ್ತಿದ್ದ. ಅವಸರದಲ್ಲಿ ಒಂದು ಪೀಠವನ್ನು ಉಳಿಸಿ ಓಡಿದನಂತೆ. ಮನೆಯ ಒಳಗೆ ಬಂದ ಝೆನ್ ಗುರು ಆ ಪೀಠವನ್ನೂ ಹೊತ್ತು, ಕಳ್ಳನನ್ನು ಹಿಂಬಾಲಿಸಿ , ಅವನಿಗೆ ಕೊಟ್ಟು ಬಿಟ್ಟನಂತೆ. ಎಲ್ಲವನ್ನೂ ದೋಚಿದರು ಸಹ ಕಿಟಕಿಯಲ್ಲಿ ಬೋಧಿಯ ಸ್ವರೂಪವಾದ ಚಂದ್ರನನ್ನು ದೊಚಲಾದೀತೇ? ಈ ಸಂದರ್ಭದಲ್ಲಿ ಬರೆದ ಹೈಕು ಇದಾಗಿದೆ.
The thief left it behind:
the moon
at my window
Sunday, October 28, 2012
ವಿಜ್ಞಾನ ಮತ್ತು ಕಲೆ
ಭಾರತದ ಪರಮಾಣು ಪಿತಾಮಹ ರೆಂದು ಖ್ಯಾತರಾಗಿರುವ ಹೋಮಿ ಜೆಹಾಂಗೀರ್ ಭಾಭಾ ಅವರು ದೇಶ ಕಂಡ ಮಹಾನ್ ವಿಜ್ಞಾನಿಗಳಲ್ಲಿ ಒಬ್ಬರು. ವಿಜ್ಞಾನ-ತಂತ್ರಜ್ಞಾನವೇ ಅಲ್ಲದೆ, ಭಾಭಾ ಅವರು ಉತ್ತಮ ಆಡಳಿತಕಾರರಾಗಿ ಸಹ ಭಾರತಕ್ಕೆ ಕೊಡುಗೆ ನೀಡಿದರು.ಭಾಭಾ ಅಣು ಸಂಶೋಧನಾ ಕೇಂದ್ರ,ಟಾಟಾ ಮೂಲ ವಿಜ್ಞಾನ ಸಂಶೋಧನಾ ಕೇಂದ್ರ ಮುಂತಾದ ಉನ್ನತ ಮಟ್ಟದ ಸಂಸ್ಥೆಗಳನ್ನೂ ಹುಟ್ಟುಹಾಕಿದರು. ೧೯೬೬ ರಲ್ಲಿ ಭಾಭಾ ಅವರ ಅಕಾಲಿಕ ಮರಣ ಸಂಭವಿಸಿದಾಗ ಕಲಾ ಪೋಷಕರಾದ ವಾನ್ ಲೆಯ್ದೆನ್ ಅವರು -- "ಭಾರತದ ಕಲಾ ಪ್ರಪಂಚ ಅನಾಥ ವಾಯಿತು" ಎಂದು ಉದ್ಗರಿಸಿದರು. ಇದೇನು, ಮೇಲು ದರ್ಜೆಯ ವಿಜ್ಞಾನಿ ಇಲ್ಲವಾದರೆ ಕಲಾ ಸಾಮ್ರಾಜ್ಯ ಹೇಗೆ ಬಡವಾಯಿತು ಎಂದು ಪ್ರಶ್ನಿಸಬಹುದು. ಸ್ವಾರಸ್ಯದ ಸಂಗತಿಯೆಂದರೆ ಭಾಭಾ ಅವರ ಬುದ್ಧಿ - ಜ್ಞಾನಗಳು ವಿಜ್ನಾನಿಯದ್ದಾದರೆ, ಹೃದಯವು ಮಾತ್ರ ಅಪ್ಪಟ ಕಲಾವಿದನದ್ದು, ಸಹೃದಯನದ್ದು. ಸರ್. ಸಿ. ವಿ. ರಾಮನ್ ಅವರು ಭಾಭಾರನ್ನು ಲಿಯೋ ನಾರ್ಡೋ ಡಾ ವಿಂಚಿ ಗೆ ಹೋಲಿಸಿದರು. ಹೋಲಿಕೆ ಅತ್ಯಂತ ಸಮಜಸವಾಗಿದೆ. ಡಾ ವಿಂಚಿ ಯಂತೆ ಭಾಭಾ ಸಹ ಬಹುಮುಖ ಪ್ರತಿಭೆ. ಭಾಭಾ ಅವರು ಫಿಲ್ ಹಾರ್ಮಾನಿಕ್ ಆರ್ಕೆಸ್ತ್ರದಲ್ಲಿ ( ವಾದ್ಯ ಗೋಷ್ಠಿ ಯಲ್ಲಿ ) ವಯೋಲಾ ನುಡಿಸುತ್ತಿದ್ದರು. ಕೇಂಬ್ರಿಡ್ಜ್ ನ ನೌಕಾ ತಂಡದಲ್ಲಿ ( ರೆಗಟ್ಟ) ದಲ್ಲಿ ದೋಣಿ ನಡೆಸುವ ಅಂಬಿಕರಾಗಿದ್ದರು, ಇದಲ್ಲದೆ ಮೊಜಾರ್ಟ್ ನ ' ದಿ ಮ್ಯಾರೇಜ್ ಆಫ್ ಫಿಗಾರೊ' ರೂಪಕಕ್ಕೆ ರಂಗ ಸಜ್ಜಿಕೆ ಮತ್ತು ಕುಂಚ ಹಿಡಿದಿದ್ದರು . ವಿಜ್ಞಾನಿಯಾಗಿ ಪರಮಾಣುಗಳ ಒಳಹೊಕ್ಕು ಬೇಧಿಸಿದ ಭಾಭಾ, ಕಲಾವಿದನಾಗಿ ಆಂತರ್ಯದ
ಹೃದಯದಾಳವನ್ನು ಶೋಧಿಸಿದರು. ಕವಿಹೃದಯಿ ಭಾಭಾ ಒಮ್ಮೆ ಹೀಗೆಂದಿದ್ದರು ನನ್ನ ಜೀವಿತದ ಅವಧಿಯನ್ನು ಕಾಲ ಪರಿಮಿತಿಯಿಂದ ಹೆಚ್ಚಿಸಿಕೊಳ್ಳಲಾದು, ಆದರೆ ತೀವ್ರತೆಯನ್ನು ವೃದ್ಧಿಸುವುದರಿಂದ ಅದನ್ನು (ಜೀವಿತವನ್ನು) ವೃದ್ದಿ ಸಿ ಕೊಳ್ಳುತ್ತೇನೆ. ಕಲೆ, ಸಂಗೀತ, ಕಾವ್ಯ - ಇವುಗಳ ವ್ಯವಸ್ಥಿತಿಗಳಿಂದ ನನ್ನ ಒಂದೇ ಧ್ಯೇಯವೆಂದರೆ - ಕಲಾವ್ಯವಸ್ಥಿತಿ ಯಿಂದ ಜೀವನ ತೀವ್ರತೆಯ ಅನುಸಂಧಾನ
Sunday, September 30, 2012
ಪುಟ್ಟಿ
ಶಿಶುವಿಹಾರದಲ್ಲಿ ಚಿಣ್ಣರೆಲ್ಲರೂ ಬಣ್ಣದ ಬಳಪಗಳನ್ನು ಹಿಡಿದು ಚಿತ್ರ ಬಿಡಿಸುವುದರಲ್ಲಿ ಮಗ್ನರಾಗಿದ್ದರು. ಸವಿತಾ ಟೀಚರ್ ತರಗತಿಯನ್ನು ಸುತ್ತು ಹಾಕುತ್ತ, ಯಾವ ಮಗುವಿನ ಕುಂಚ ಏನನ್ನು ಅವತರಿಸುತ್ತಿದೆ ಎಂದು ನೋಡುತ್ತಿದ್ದರು . ಪುಟ್ಟಿಯ ಪಕ್ಕ ನಿಂತು "ಇದೇನು ಪುಟ್ಟಿ, ಏನು ಬಿಡಿಸುತ್ತಿದೀಯ?" ಎಂದ ಕೇಳಿದರು. "ದೇವರನ್ನು ಬಿದುಸುತ್ತಿದೀನಿ" ಎಂದಳು ಪುಟ್ಟಿ. ಆದರೆ ಯಾರೂ ದೇವರನ್ನು ನೋಡಿಯೇ ಇಲ್ಲವಲ್ಲ ಎಂದರು ಸವಿತಾ ಟೀಚರ್ . "ಶ್ ! .. ಇನ್ನು ಕೆಲವೇ ನಿಮಿಷಗಳಲ್ಲಿ ಎಲ್ಲರು ನೋಡುವರು ಎಂದಳು ಮುಗ್ಧ ಪುಟ್ಟಿ.
Thursday, August 30, 2012
ಆನಂದಂ ಬ್ರಹ್ಮ
ಸಕಲ ಜೀವ ರಾಶಿಗಳು ಅನುಗಾಲ ಆರಿಸುವುದು ಆನಂದವನ್ನೇ. ನಮ್ಮ ಬಹುತೇಕ ಎಲ್ಲ ಚಟುವಟಿಕೆಗಳು ಸುಖ ಸಂಪಾದನೆಯ ಸುತ್ತ ಮುತ್ತಲೇ ಇರುತ್ತವೆ. ಎಲ್ಲವನ್ನು ಬಿಟ್ಟು ಸರ್ವಸಂಘ ಪರ್ತ್ಯಾಗಿ ಆಗಬಯಸುವ ಸನ್ಯಾಸಿಯೂ ಸಹ ಸರ್ವ ತ್ಯಾಗದಿಂದ ತನಗೆ ಸಂತೋಷ ನೆಮ್ಮದಿಗಳು ದೊರೆಯುವುದರಿಂದಲೇ ತ್ಯಾಗಾಸಕ್ತನಾಗುವುದು. ಸುಖ ಒಂದೇ ಜೀವನದ ಮೌಲಯ ಎಂದು ಪರಿಗಣಿಸಿ ಅತಿಯಾದ ವಿಷಯಾಸಕ್ತಿಯಲ್ಲಿ ತೊಡಗಿದರೆ ಅದನ್ನು 'ಹೆಡೋನಿಸಂ' (Hedonism) ಎಂದು ಕರೆಸಿಕೊಂಡರೆ, ಧರ್ಮ ವಿರುದ್ಧವಲ್ಲದ ಸರ್ವಭೂತ ಹಿತೋರಥದ ಸಂತೋಷ- ಸುಖದ ಅರಸಿವಿಕೆ ಹಂತ ಹಂತವಾಗಿ ಬ್ರಹ್ಮಾನಂದ ವನ್ನು ಸಹ ದೊರಕಿಸಿ ಕೊಡುತ್ತದೆ. ನಾ ನಾ ವಿಧವಾದ ಆನಂದ ಮೀಮಾಂಸೆ ಸನಾತನ ಧರ್ಮದಲ್ಲಿ ಇದ್ದು ಆನಂದವನ್ನು ಬ್ರಹ್ಮ ವಸ್ತುವಿಗೆ ಹೋಲಿಸಿದ್ದಾರೆ ನಮ್ಮ ಸನಾತನರು. ಪ್ರಚಲಿತ ಮನೋವಿಜ್ಞಾನಿ ಗಳಲ್ಲಿ ಮಾರ್ಟಿನ್ ಸಲಿಗ್ಮನ್ (Martin Seligman) ಅವರು ಆನಂದದ ಮೂಲವನ್ನು ಹುಡುಕಲು ಹೊರಟು 'PERMA' ಎಂಬ ಪಂಚಾಕ್ಷರ ಸೂತ್ರವನ್ನು ಪ್ರತಿಪಾದಿಸಿದರು. ಈ ಐದು ಬಗೆಯ ಸುಖಪ್ರದ ಸಾಧನಗಳಲ್ಲಿ "ವಸ್ತು ಜನ್ಯ ಸುಖ" - Pleasure ಮೊದಲನೆಯದು. ಈ ವಸ್ತು ಜನ್ಯ ಸುಖ, ಪಂಚೆದ್ರಿಯಗಳಿಗೆ ಮುದದಿಂದ ಉಂಟಾಗುತ್ತದೆ. ಇಂಪಾದ ಗಾನ ಲಾಲಿಸುವುದಾಗಲಿ, ಘಮ ಘಮಿಸುವ ಸುಗಂಧ ದ್ರವ್ಯದ ಸುವಾಸನೆಯಾಗಲಿ , ಸುಗ್ರಾಸ ಭೋಜನದಿಂದಾಗಲಿ , ಇವೆ ಮೊದಲಾದ ವಸ್ತುಜನ್ಯ ಸಂತೋಷವು ಇಲ್ಲಿ ಸೇರಿಕೊಳ್ಳುತ್ತವೆ. "ವ್ಯವಸ್ಥಿತಿ" - Enagagement ಇಂದ ದೊರೆಯುವ ಸಂತಸ ಎರಡನೆಯ ಸ್ತರದ್ದಾಗಿರುತ್ತದೆ. ನಾವು ಮಾಡುವ ಕೆಲಸದಲ್ಲಿ ಶ್ರದ್ದೆ, ಉತ್ಸಾಹವಿದ್ದು, ಕಾರ್ಯ ತತ್ಪರತೆ ಇಂದ ದೊರೆಯುವ ಸಂತಸ ಇದಾಗಿರುತ್ತದೆ. ಸಂಪೂರ್ಣವಾಗಿ ಮಗ್ನವಾಗಿ ತನು, ಮನ , ಆತ್ಮಗಳನ್ನು ಒಂದು ಮಾಡಿ ಸಂಪೂರ್ಣವಾಗಿ ತೊಡಗಿಸಿ ಕೊಂದ ಮಾಡಿದ ಕೆಲಸದ ಸಂತಸವೇ ಸಂತಸ. ಸರ್ ಎಂ. ವಿಶ್ವೇಶ್ವರಯ್ಯ ನವರು ಹೇಳುತ್ತಿದ್ದಂತೆ " ಕಸ ಗುಡಿಸುವುದು ನಮ್ಮ ಕೆಲಸವಾದರೆ, ನಾವು ಗುಡಿಸಿದ ರಸ್ತೆ ಜಗತ್ತಿನಲ್ಲೇ ಅತ್ಯಂತ ಸ್ವಚ್ಛ ವಾಗಿರುವ ರಸ್ತೆಯಾಗ ಬೇಕು -- ಹಾಗಿರಬೇಕು ನಮ್ಮ ಕಾರ್ಯ ಶ್ರದ್ದೆ. Relationship - "ಸಂಬಂಧ-ಬಾಂಧವ್ಯ" ಗಳಿಂದ ಪ್ರಾಪ್ತಿಯಾಗುವ ಸಂತೋಷ ಮೂರನೆಯದು. ಮಾನವ ಸಮಾಜ ಜೀವಿ. ಯಾರಿಗೆ ಒಳ್ಳೆಯ ಒಡನಾಟ ದೊರೆಯುವುದೋ ಅವರೇ ಪುಣ್ಯವಂತರು. ಸಲಿಗ್ಮನ್ ಗುರುತಿಸುವ ನಾಲ್ಕನೇ ಪಂಕ್ತಿಯ ಸಂತಸ ವೆಂದರೆ "ಅರ್ಥ ಗ್ರಹಣ" - Meaning . ಜೀವನದಲ್ಲಿ ಎಲ್ಲವೂ ಇದ್ದರೂ "ಏನೋ" ಹೇಳಿಕೊಳ್ಳಲಾರದ ತಾಕಲಾಟ. ಉತ್ತರಗಳಿಲ್ಲ ಪ್ರಶ್ನೆಗಳು ಎಲ್ಲರನ್ನು ಒಮ್ಮೆಯಾದರೂ ಕಾದಿರುವುದು ಸಹಜವೇ. ಈ ಮಾಯಮಯವಾದ ಪ್ರಪಂಚದ ಅರ್ಥ ಗ್ರಹಣವೆ ಒಂದು ಸಂತಸ. ಸಂತಸದ ಐದನೆಯ ಮೂಲವೆಂದರೆ Achievement - "ಸಾಧನೆಯ ಸಂತೃಪ್ತಿ". ಎಷ್ಟೇ ಉಟ್ಟರು ಉಂಡರೂ, ಸಂಸಾರದಲ್ಲಿ ಸಾಮರಸ್ಯ ಇದ್ದರೂ, ಸಾಧನೆಯ ಗಂಧ ವಿರದಿದ್ದರೆ ಜೀವನ ನೀರಸವೇ ಸರಿ.
Friday, July 27, 2012
ಕನಕಧಾರಾ ಸ್ತೋತ್ರಂ
ಅಂಗಂ ಹರೇಃ ಪುಲಕ-ಭೂಷಣಮಾಶ್ರಯಂತೀ
ಭೃಂಗಾಗನೇವ ಮುಕುಲಾಭರಣಂ ತಮಾಲಂ |
ಅಂಗೀಕೃತಾಖಿಲವಿಭೂತಿರಪಾಂಗಲೀಲಾ
ಮಾಂಗಲ್ಯದಾಸ್ತು ಮಮ ಮಂಗಲದೇವತಾಯಾಃ ||1||
ಮುಗ್ಧಾಮುಹುರ್ವಿದಧತೀ ವದನೇ ಮುರಾರೇಃ
ಪ್ರೇಮತ್ರಪಾಪ್ರಣಿಹಿತಾನಿ ಗತಾಗತಾನಿ |
ಮಾಲಾ-ದೃಶೋ-ರ್ಮಧುಕರೀವ ಮಹೋತ್ಪಲೇ ಯಾ
ಸಾ ಮೇ ಶ್ರಿಯಂ ದಿಶತು ಸಾಗರ-ಸಂಭವಾಯಾಃ ||2||
ಆಮೀಲಿತಾಕ್ಷಮಧಿಗಮ್ಯ ಮುದಾ ಮುಕುಂದ-
ಮಾನಂದಕಂದಮನಿಮೇಷಮನಂಗತಂತ್ರಂ |
ಆಕೇಕರ-ಸ್ಥಿತ-ಕನೀನಿಕ-ಪಕ್ಷ್ಮ ನೇತ್ರಂ
ಭೂತ್ಯೈ ಭವೇನ್ಮಮ ಭುಜಂಗಶಯಾಂಗನಾಯಾಃ ||3||
ಬಾಹ್ವಂತರೇ ಮಧುಜಿತಃ ಶ್ರಿತಕೌಸ್ತುಭೇ ಯಾ
ಹಾರಾವಲೀವ ಹರಿನೀಲಮಯೀ ವಿಭಾತಿ |
ಕಾಮಪ್ರದಾ ಭಗವತೋsಪಿ ಕಟಾಕ್ಷಮಾಲಾ
ಕಲ್ಯಾಣಮಾವಹತು ಮೇ ಕಮಲಾಲಯಾಯಾಃ ||4||
ಕಾಲಾಂಬುದಾಲಿ-ಲಲಿತೋರಸಿಕೈಟಭಾರೇಃ
ಧಾರಾಧರೇ ಸ್ಫುರತಿ ಯಾ ತಟಿದಂಗನೇವ |
ಮಾತುಃ ಸಮಸ್ತಜಗತಾಂ ಮಹನೀಯಮೂರ್ತಿಃ
ಭದ್ರಾಣಿ ಮೇ ದಿಶತು ಭಾರ್ಗವ-ನಂದನಾಯಾಃ ||5||
ಪ್ರಾಪ್ತಂ ಪದಂ ಪ್ರಥಮತಃ ಖಲು ಯತ್ ಪ್ರಭಾವಾತ್
ಮಾಂಗಲ್ಯಭಾಜಿ ಮಧು-ಮಾಥಿನಿ ಮನ್ಮಥೇನ |
ಮಯ್ಯಾಪತೇತ್ತದಿಹ ಮಂಥರಮೀಕ್ಷಣಾರ್ಧಂ
ಮಂದಾಲಸಂ ಚ ಮಕರಾಲಯಕನ್ಯಕಾಯಾಃ ||6||
ವಿಶ್ವಾಮರೇಂದ್ರ-ಪದವಿಭ್ರಮ-ದಾನದಕ್ಷಂ
ಆನಂದ-ಹೇತುರಧಿಕಂ ಮಧುವಿದ್ವಿಷೋsಪಿ |
ಈಷನ್ನಿಷೀದತು ಮಯಿ ಕ್ಷಣಮೀಕ್ಷಣಾರ್ಧಂ
ಇಂದೀವರೋದರ ಸಹೋದರಮಿಂದಿರಾಯಾಃ ||7||
ಇಷ್ಟಾವಿಶಿಷ್ಟಮತಯೋsಪಿ ಯಯಾ ದಯಾರ್ದ್ರ-
ದೃಷ್ಟ್ಯಾ ತ್ರಿವಿಷ್ಟಪ ಪದಂ ಸುಲಭಂ ಭಜಂತೇ |
ದೃಷ್ಟಿಃಪ್ರಹೃಷ್ಟಕಮಲೋದರದೀಪ್ತಿರಿಷ್ಟಾಂ
ಪುಷ್ಟಿಂ ಕೃಷೀಷ್ಟಮಮ ಪುಷ್ಕರ-ವಿಷ್ಟರಾಯಾಃ ||8||
ದದ್ಯಾದ್ದಯಾನುಪವನೋ ದ್ರವಿಣಾಂಬುಧಾರಾಮ್
ಅಸ್ಮಿನ್ನಕಿಂಚನ-ವಿಹಂಗಶಿಶೌ ವಿಷಣ್ಣೇ |
ದುಷ್ಕರ್ಮ-ಘರ್ಮಮಪನೀಯ ಚಿರಾಯ ದೂರಾತ್
ನಾರಾಯಣ-ಪ್ರಣಯಿನೀ-ನಯನಾಂಬುವಾಹಃ ||9||
ಗೀರ್ದೇವತೇತಿ ಗರುಡಧ್ವಜ-ಸುಂದರೀತಿ
ಶಾಕಂಭರೀತಿ ಶಶಿಶೇಖರ-ವಲ್ಲಭೇತಿ |
ಸೃಷ್ಟಿ-ಸ್ಥಿತಿ-ಪ್ರಲಯಕೇಲಿಷು ಸಂಸ್ಥಿತಾಯೈ
ತಸ್ಯೈ ನಮಸ್ತ್ರಿಭುವನೈಕ-ಗುರೋಸ್ತರುಣ್ಯೈ ||10||
ಶ್ರುತೈ ನಮೋsಸ್ತು ಶುಭಕರ್ಮ-ಫಲಪ್ರಸೂತ್ಯೈ
ರತ್ಯೈ ನಮೋsಸ್ತು ರಮಣೀಯ-ಗುಣಾಶ್ರಯಾಯೈ |
ಶಕ್ಯೈ ನಮೋsಸ್ತು ಶತಪತ್ರ-ನಿಕೇತನಾಯೈ
ಪುಷ್ಟ್ಯೈ ನಮೋsಸ್ತು ಪುರುಷೋತ್ತಮ-ವಲ್ಲಭಾಯೈ ||11||
ನಮೋsಸ್ತು ನಾಲೀಕ-ನಿಭಾನನಾಯೈ
ನಮೋsಸ್ತು ದುಗ್ಧೋದಧಿ-ಜನ್ಮಭೂತ್ಯೈ |
ನಮೋsಸ್ತು ಸೋಮಾಮೃತ-ಸೋದರಾಯೈ
ನಮೋsಸ್ತು ನಾರಾಯಣ-ವಲ್ಲಭಾಯೈ ||12||
ನಮೋsಸ್ತು ಹೇಮಾಂಬುಜ-ಪೀಠಿಕಾಯೈ
ನಮೋsಸ್ತು ಭೂಮಂಡಲನಾಯಿಕಾಯೈ |
ನಮೋsಸ್ತು ದೇವಾದಿ-ದಯಾಪರಾಯೈ
ನಮೋsಸ್ತು ಶಾರ್ಙ್ಗಾಯುಧ-ವಲ್ಲಭಾಯೈ ||13||
ನಮೋsಸ್ತು ದೇವ್ಯೈ ಭೃಗುನಂದನಾಯೈ
ನಮೋsಸ್ತು ವಿಷ್ಣೋರುರಸಿ ಸ್ಥಿತಾಯೈ |
ನಮೋsಸ್ತು ಲಕ್ಷ್ಮ್ಯೈ ಕಮಲಾಲಯಾಯೈ
ನಮೋsಸ್ತು ದಾಮೋದರ-ವಲ್ಲಭಾಯೈ ||14||
ನಮೋsಸ್ತು ಕಾಂತ್ಯೈ ಕಮಲೇಕ್ಷಣಾಯೈ
ನಮೋsಸ್ತು ಭೂತ್ಯೈ ಭುವನಪ್ರಸೂತ್ಯೈ |
ನಮೋsಸ್ತು ದೇವಾಧಿಭಿರರ್ಚಿತಾಯೈ
ನಮೋsಸ್ತು ನಂದಾತ್ಮಜ-ವಲ್ಲಭಾಯೈ ||15||
ಸಂಪತ್ಕರಾಣಿ ಸಕಲೇಂದ್ರಿಯನಂದನಾನಿ
ಸಾಮ್ರಾಜ್ಯದಾನವಿಭವಾನಿ ಸರೋರುಹಾಕ್ಷಿ |
ತ್ವದ್ವಂದನಾನಿ ದುರಿತಾಹರಣೋದ್ಯತಾನಿ
ಮಾಮೇವ ಮಾತರನಿಶಂ ಕಲಯಂತು ಮಾನ್ಯೇ ||16||
ಯತ್ಕಟಾಕ್ಷಸಮುಪಾಸನಾ ವಿಧಿಃ
ಸೇವಕಸ್ಯ ಸಕಲಾರ್ಥಸಂಪದಃ |
ಸಂತನೋತಿ ವಚನಾಂಗಮಾನಸ್ಯೈ-
ಸ್ತ್ವಾಂ ಮುರಾರಿಹೃದಯೇಶ್ವರೀಂ ಭಜೇ ||17||
ಸರಸಿಜನಿಲಯೇ ಸರೋಜಹಸ್ತೇಃ
ಧವಲತಮಾಂಶುಕಗಂಧಮಾಲ್ಯ ಶೋಭೇ |
ಭಗವತಿ ಹರಿವಲ್ಲಭೇ ಮನೋಜ್ಞೆ
ತ್ರಿಭುವನಭೂತಿಕರಿ ಪ್ರಸೀದ ಮಹ್ಯಮ್ ||18||
ದಿಗ್ಘಸ್ತಿಭಿಃ ಕನಕಕುಂಭಮುಖಾವಸೃಷ್ಟ
ಸ್ವರ್ವಾಹಿನೀವಿಮಲಚಾರುಜಲಪ್ಲುತಾಂಗೀಮ್ |
ಪ್ರಾತರ್ನಮಾಮಿ ಜಗತಾಂ ಜನನೀಮಶೇಷ
ಲೋಕಾಧಿನಾಥಗೃಹಿಣೀಮಮೃತಾಬ್ಧಿ ಪುತ್ರೀಮ್ ||19||
ಕಮಲೇ ಕಮಲಾಕ್ಷವಲ್ಲಭೇ ತ್ವಂ
ಕರುಣಾಪೂರತರಂಗಿತೈರಪಾಂಗೈಃ |
ಅವಲೋಕಯ ಮಾಮಕಿಂಚನಾನಾಂ
ಪ್ರಥಮಂ ಪಾತ್ರಮಕೃತ್ರಿಮಂ ದಯಾಯಾಃ ||20||
ಸ್ತುವಂತಿ ಯೇ ಸ್ತುತಿಭಿರಮೀಭಿರನ್ವಹಂ
ತ್ರಯೀಮಯೀಂ ತ್ರಿಭುವನ-ಮಾತರಂ ರಮಾಂ |
ಗುಣಾಧಿಕಾ ಗುರುತರ-ಭಾಗ್ಯ-ಭಾಗಿನಃ
ಭವಂತಿ ತೇ ಭುವಿ ಬುಧಭಾವಿತಾಶಯಾಃ ||21||
~*~*~*~
Credits: http://oppanna.com/
ಭೃಂಗಾಗನೇವ ಮುಕುಲಾಭರಣಂ ತಮಾಲಂ |
ಅಂಗೀಕೃತಾಖಿಲವಿಭೂತಿರಪಾಂಗಲೀಲಾ
ಮಾಂಗಲ್ಯದಾಸ್ತು ಮಮ ಮಂಗಲದೇವತಾಯಾಃ ||1||
ಮುಗ್ಧಾಮುಹುರ್ವಿದಧತೀ ವದನೇ ಮುರಾರೇಃ
ಪ್ರೇಮತ್ರಪಾಪ್ರಣಿಹಿತಾನಿ ಗತಾಗತಾನಿ |
ಮಾಲಾ-ದೃಶೋ-ರ್ಮಧುಕರೀವ ಮಹೋತ್ಪಲೇ ಯಾ
ಸಾ ಮೇ ಶ್ರಿಯಂ ದಿಶತು ಸಾಗರ-ಸಂಭವಾಯಾಃ ||2||
ಆಮೀಲಿತಾಕ್ಷಮಧಿಗಮ್ಯ ಮುದಾ ಮುಕುಂದ-
ಮಾನಂದಕಂದಮನಿಮೇಷಮನಂಗತಂತ್ರಂ |
ಆಕೇಕರ-ಸ್ಥಿತ-ಕನೀನಿಕ-ಪಕ್ಷ್ಮ ನೇತ್ರಂ
ಭೂತ್ಯೈ ಭವೇನ್ಮಮ ಭುಜಂಗಶಯಾಂಗನಾಯಾಃ ||3||
ಬಾಹ್ವಂತರೇ ಮಧುಜಿತಃ ಶ್ರಿತಕೌಸ್ತುಭೇ ಯಾ
ಹಾರಾವಲೀವ ಹರಿನೀಲಮಯೀ ವಿಭಾತಿ |
ಕಾಮಪ್ರದಾ ಭಗವತೋsಪಿ ಕಟಾಕ್ಷಮಾಲಾ
ಕಲ್ಯಾಣಮಾವಹತು ಮೇ ಕಮಲಾಲಯಾಯಾಃ ||4||
ಕಾಲಾಂಬುದಾಲಿ-ಲಲಿತೋರಸಿಕೈಟಭಾರೇಃ
ಧಾರಾಧರೇ ಸ್ಫುರತಿ ಯಾ ತಟಿದಂಗನೇವ |
ಮಾತುಃ ಸಮಸ್ತಜಗತಾಂ ಮಹನೀಯಮೂರ್ತಿಃ
ಭದ್ರಾಣಿ ಮೇ ದಿಶತು ಭಾರ್ಗವ-ನಂದನಾಯಾಃ ||5||
ಪ್ರಾಪ್ತಂ ಪದಂ ಪ್ರಥಮತಃ ಖಲು ಯತ್ ಪ್ರಭಾವಾತ್
ಮಾಂಗಲ್ಯಭಾಜಿ ಮಧು-ಮಾಥಿನಿ ಮನ್ಮಥೇನ |
ಮಯ್ಯಾಪತೇತ್ತದಿಹ ಮಂಥರಮೀಕ್ಷಣಾರ್ಧಂ
ಮಂದಾಲಸಂ ಚ ಮಕರಾಲಯಕನ್ಯಕಾಯಾಃ ||6||
ವಿಶ್ವಾಮರೇಂದ್ರ-ಪದವಿಭ್ರಮ-ದಾನದಕ್ಷಂ
ಆನಂದ-ಹೇತುರಧಿಕಂ ಮಧುವಿದ್ವಿಷೋsಪಿ |
ಈಷನ್ನಿಷೀದತು ಮಯಿ ಕ್ಷಣಮೀಕ್ಷಣಾರ್ಧಂ
ಇಂದೀವರೋದರ ಸಹೋದರಮಿಂದಿರಾಯಾಃ ||7||
ಇಷ್ಟಾವಿಶಿಷ್ಟಮತಯೋsಪಿ ಯಯಾ ದಯಾರ್ದ್ರ-
ದೃಷ್ಟ್ಯಾ ತ್ರಿವಿಷ್ಟಪ ಪದಂ ಸುಲಭಂ ಭಜಂತೇ |
ದೃಷ್ಟಿಃಪ್ರಹೃಷ್ಟಕಮಲೋದರದೀಪ್ತಿರಿಷ್ಟಾಂ
ಪುಷ್ಟಿಂ ಕೃಷೀಷ್ಟಮಮ ಪುಷ್ಕರ-ವಿಷ್ಟರಾಯಾಃ ||8||
ದದ್ಯಾದ್ದಯಾನುಪವನೋ ದ್ರವಿಣಾಂಬುಧಾರಾಮ್
ಅಸ್ಮಿನ್ನಕಿಂಚನ-ವಿಹಂಗಶಿಶೌ ವಿಷಣ್ಣೇ |
ದುಷ್ಕರ್ಮ-ಘರ್ಮಮಪನೀಯ ಚಿರಾಯ ದೂರಾತ್
ನಾರಾಯಣ-ಪ್ರಣಯಿನೀ-ನಯನಾಂಬುವಾಹಃ ||9||
ಗೀರ್ದೇವತೇತಿ ಗರುಡಧ್ವಜ-ಸುಂದರೀತಿ
ಶಾಕಂಭರೀತಿ ಶಶಿಶೇಖರ-ವಲ್ಲಭೇತಿ |
ಸೃಷ್ಟಿ-ಸ್ಥಿತಿ-ಪ್ರಲಯಕೇಲಿಷು ಸಂಸ್ಥಿತಾಯೈ
ತಸ್ಯೈ ನಮಸ್ತ್ರಿಭುವನೈಕ-ಗುರೋಸ್ತರುಣ್ಯೈ ||10||
ಶ್ರುತೈ ನಮೋsಸ್ತು ಶುಭಕರ್ಮ-ಫಲಪ್ರಸೂತ್ಯೈ
ರತ್ಯೈ ನಮೋsಸ್ತು ರಮಣೀಯ-ಗುಣಾಶ್ರಯಾಯೈ |
ಶಕ್ಯೈ ನಮೋsಸ್ತು ಶತಪತ್ರ-ನಿಕೇತನಾಯೈ
ಪುಷ್ಟ್ಯೈ ನಮೋsಸ್ತು ಪುರುಷೋತ್ತಮ-ವಲ್ಲಭಾಯೈ ||11||
ನಮೋsಸ್ತು ನಾಲೀಕ-ನಿಭಾನನಾಯೈ
ನಮೋsಸ್ತು ದುಗ್ಧೋದಧಿ-ಜನ್ಮಭೂತ್ಯೈ |
ನಮೋsಸ್ತು ಸೋಮಾಮೃತ-ಸೋದರಾಯೈ
ನಮೋsಸ್ತು ನಾರಾಯಣ-ವಲ್ಲಭಾಯೈ ||12||
ನಮೋsಸ್ತು ಹೇಮಾಂಬುಜ-ಪೀಠಿಕಾಯೈ
ನಮೋsಸ್ತು ಭೂಮಂಡಲನಾಯಿಕಾಯೈ |
ನಮೋsಸ್ತು ದೇವಾದಿ-ದಯಾಪರಾಯೈ
ನಮೋsಸ್ತು ಶಾರ್ಙ್ಗಾಯುಧ-ವಲ್ಲಭಾಯೈ ||13||
ನಮೋsಸ್ತು ದೇವ್ಯೈ ಭೃಗುನಂದನಾಯೈ
ನಮೋsಸ್ತು ವಿಷ್ಣೋರುರಸಿ ಸ್ಥಿತಾಯೈ |
ನಮೋsಸ್ತು ಲಕ್ಷ್ಮ್ಯೈ ಕಮಲಾಲಯಾಯೈ
ನಮೋsಸ್ತು ದಾಮೋದರ-ವಲ್ಲಭಾಯೈ ||14||
ನಮೋsಸ್ತು ಕಾಂತ್ಯೈ ಕಮಲೇಕ್ಷಣಾಯೈ
ನಮೋsಸ್ತು ಭೂತ್ಯೈ ಭುವನಪ್ರಸೂತ್ಯೈ |
ನಮೋsಸ್ತು ದೇವಾಧಿಭಿರರ್ಚಿತಾಯೈ
ನಮೋsಸ್ತು ನಂದಾತ್ಮಜ-ವಲ್ಲಭಾಯೈ ||15||
ಸಂಪತ್ಕರಾಣಿ ಸಕಲೇಂದ್ರಿಯನಂದನಾನಿ
ಸಾಮ್ರಾಜ್ಯದಾನವಿಭವಾನಿ ಸರೋರುಹಾಕ್ಷಿ |
ತ್ವದ್ವಂದನಾನಿ ದುರಿತಾಹರಣೋದ್ಯತಾನಿ
ಮಾಮೇವ ಮಾತರನಿಶಂ ಕಲಯಂತು ಮಾನ್ಯೇ ||16||
ಯತ್ಕಟಾಕ್ಷಸಮುಪಾಸನಾ ವಿಧಿಃ
ಸೇವಕಸ್ಯ ಸಕಲಾರ್ಥಸಂಪದಃ |
ಸಂತನೋತಿ ವಚನಾಂಗಮಾನಸ್ಯೈ-
ಸ್ತ್ವಾಂ ಮುರಾರಿಹೃದಯೇಶ್ವರೀಂ ಭಜೇ ||17||
ಸರಸಿಜನಿಲಯೇ ಸರೋಜಹಸ್ತೇಃ
ಧವಲತಮಾಂಶುಕಗಂಧಮಾಲ್ಯ ಶೋಭೇ |
ಭಗವತಿ ಹರಿವಲ್ಲಭೇ ಮನೋಜ್ಞೆ
ತ್ರಿಭುವನಭೂತಿಕರಿ ಪ್ರಸೀದ ಮಹ್ಯಮ್ ||18||
ದಿಗ್ಘಸ್ತಿಭಿಃ ಕನಕಕುಂಭಮುಖಾವಸೃಷ್ಟ
ಸ್ವರ್ವಾಹಿನೀವಿಮಲಚಾರುಜಲಪ್ಲುತಾಂಗೀಮ್ |
ಪ್ರಾತರ್ನಮಾಮಿ ಜಗತಾಂ ಜನನೀಮಶೇಷ
ಲೋಕಾಧಿನಾಥಗೃಹಿಣೀಮಮೃತಾಬ್ಧಿ ಪುತ್ರೀಮ್ ||19||
ಕಮಲೇ ಕಮಲಾಕ್ಷವಲ್ಲಭೇ ತ್ವಂ
ಕರುಣಾಪೂರತರಂಗಿತೈರಪಾಂಗೈಃ |
ಅವಲೋಕಯ ಮಾಮಕಿಂಚನಾನಾಂ
ಪ್ರಥಮಂ ಪಾತ್ರಮಕೃತ್ರಿಮಂ ದಯಾಯಾಃ ||20||
ಸ್ತುವಂತಿ ಯೇ ಸ್ತುತಿಭಿರಮೀಭಿರನ್ವಹಂ
ತ್ರಯೀಮಯೀಂ ತ್ರಿಭುವನ-ಮಾತರಂ ರಮಾಂ |
ಗುಣಾಧಿಕಾ ಗುರುತರ-ಭಾಗ್ಯ-ಭಾಗಿನಃ
ಭವಂತಿ ತೇ ಭುವಿ ಬುಧಭಾವಿತಾಶಯಾಃ ||21||
~*~*~*~
Credits: http://oppanna.com/
Subscribe to:
Posts (Atom)